ಕ್ರೂಸರ್ಗೆ ಲಾರಿ ಡಿಕ್ಕಿ 
ಜಿಲ್ಲಾ ಸುದ್ದಿ

ಕ್ರೂಸರ್ಗೆ ಲಾರಿ ಡಿಕ್ಕಿ: ಐವರ ಸಾವು

ತುಮಕೂರು: ಕೂಲಿ ಕೆಲಸಕ್ಕಾಗಿ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೂಲಿ ಕೆಲಸಗಾರರ ಕ್ರೂಸರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಆಂಜನಮ್ಮ (22), ಪೂಜಾ (35), ಮರಿಯಮ್ಮ(55), ಲಕ್ಷ್ಮಿ (28) ಎಂದು ಗುರುತಿಸಲಾಗಿದೆ. ಮೃತರೆಲ್ಲರು ರಾಯಚೂರಿನ ದೇವದುರ್ಗ ತಾಲೂಕಿನವರು, ಬೆಂಗಳೂರಿಗೆ ಕೂಲಿ ಕೆಲಸ ಹುಡುಕಿಕೊಂಡು ಬರುತ್ತಿದ್ದರು ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಮೃತ ದುರ್ದೈವಿಗಳಿದ್ದ ಕ್ರೂಸರ್ ವಾಹನ ಚಲಿಸುವಾಗ ಟೈರ್ ಪಂಕ್ಚರ್ ಆಗಿದೆ. ಟೈರು ಬದಲಾವಣೆ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ.

ಸುಮಾರು 15 ಮಂದಿ ಹಬ್ಬದ ನಿಮಿತ್ತ ಗ್ರಾಮಕ್ಕೆ ತೆರಳಿದ್ದು, ಹಬ್ಬ ಮುಗಿಸಿಕೊಂಡು ಕ್ರೂಸರ್ ವಾಹನದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಬೆಳಗಿನ ಜಾವ 3.30ರ ಸಮಯದಲ್ಲಿ ಚಿಕ್ಕನಹಳ್ಳಿ ಸಮೀಪ ಕ್ರೂಸರ್ ಪಂಚರ್ ಆಗಿದ್ದು, ಚಕ್ರ ಬದಲಾಯಿಸುವಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT