ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ಬಗ್ಗೆ ಸ್ಪಷ್ಟೀಕರಣ ಕೇಳಿದ ರಾಜ್ಯಪಾಲರು. 
ಜಿಲ್ಲಾ ಸುದ್ದಿ

ಕೆಪಿಎಸ್‌ಸಿ ನೇಮಕಕ್ಕೆ ಅಡ್ಡಿ

ಸರ್ಕಾರ ವಿವರಣೆ ನೀಡಿದರೂ ಅಂಕಿತ ಹಾಕುತ್ತಾರಾ, ಇಲ್ಲವಾ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ...

ಬೆಂಗಳೂರು: ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಸಂಬಂಧ ಸರ್ಕಾರದ ಪ್ರಸ್ತಾಪಕ್ಕೆ ಕಂಟಕ ಎದುರಾಗಿದ್ದು, ಪಟ್ಟಿಯಲ್ಲಿನ ವ್ಯಕ್ತಿಗಳ ಬಗ್ಗೆ ರಾಜ್ಯಪಾಲರು ಕೆಲ ಸ್ಪಷ್ಟೀಕರಣ ಕೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ರಾಜ್ಯಪಾಲರನ್ನು ಶುಕ್ರವಾರ ಭೇಟಿ ಮಾಡಿ ಶಿಫಾರಸ್ಸನ್ನು ಒಪ್ಪುವಂತೆ ಮನವಿ ಮಾಡಿದ್ದರು. ಆದರೆ ಅದೇ ದಿನ ಸಾಯಂಕಾಲ ರಾಜಭವನದಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಕಚೇರಿಗೆ ಸ್ಪಷ್ಟೀಕರಣ ಕೇಳಿದ ಪತ್ರ ರವಾನೆಯಾಗಿತ್ತು. ಇದಕ್ಕೆ ಸರ್ಕಾರ ಶನಿವಾರ ಸಂಜೆಯೇ  ಸ್ಪಷ್ಟೀಕರಣ ಕಳುಹಿಸಿದೆ.

ಅಧ್ಯಕ್ಷ ಸ್ಥಾನಕ್ಕೆ ಶಿಫಾರಸುಗೊಂಡ ವಿ.ಆರ್.ಸುದರ್ಶನ್ ಸದಸ್ಯರಾದ ರಫುನಂದನ್ ರಾಮಣ್ಣ, ಗೋವಿಂದಯ್ಯ ಬಗ್ಗೆ ಇನ್ನಷ್ಟು ಮಾಹಿತಿ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಇದರೊಂದಿಗೆ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆಗೆ ಕಾನೂನು ಮತ್ತು ರಾಜಕೀಯ ಅಡ್ಡಿ ಏಕಕಾಲಕ್ಕೆ ಅಂಟಿಕೊಂಡಿದ್ದು, ಸರ್ಕಾರದಿಂದ ಸ್ಪಷ್ಟೀಕರಣ ವರದಿ ಸಲ್ಲಿಕೆಯಾಗುವವರೆಗೆ ರಾಜ್ಯಪಾಲರು ಅಂಕಿತ ಹಾಕುವುದಿಲ್ಲ. ಸರ್ಕಾರ ವಿವರಣೆ ನೀಡಿದರೂ ಅಂಕಿತ ಹಾಕುತ್ತಾರಾ, ಇಲ್ಲವಾ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಏಕೆ ಸ್ಪಷ್ಟೀಕರಣ: ಸರ್ಕಾರ ಶಿಫಾರಸು ಪತ್ರ ಕಳುಹಿಸಿದ ಮರುದಿನದಿಂದಲೇ ಈ ಪಟ್ಟಿಯ ಬಗ್ಗೆ ಅಪಸ್ವರ ವ್ಯಕ್ತವಾಗಿತ್ತು. ಸುದರ್ಶನ ರಾಜಕೀಯ ವ್ಯಕ್ತಿ ಎಂಬುದು ಬಿಜೆಪಿ ವಿರೋಧಕ್ಕೆ ಕಾರಣ. ಜತೆಗೆ ಪಟ್ಟಿಯಲ್ಲಿರುವ ನಾಲ್ವರ ಬಗ್ಗೆಯೂ ಆರೋಪ ಕೇಳಿಬಂದಿದ್ದವು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಟಿ.ಬಿ.ಜಯಚಂದ್ರ, ರಾಜ್ಯಪಾಲರು ಪಟ್ಟಿ ತಿರಸ್ಕರಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ರಾಜ್ಯಪಾಲರು ಸ್ಪಷ್ಟೀಕರಣ ಕೇಳುವುದು ಸಾಮಾನ್ಯ. ಆ ನಿಟ್ಟಿನಲ್ಲಿ ರಾಜಭವನದಿಂದ ಪತ್ರ ಬಂದಿರಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT