ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ಬಗ್ಗೆ ಸ್ಪಷ್ಟೀಕರಣ ಕೇಳಿದ ರಾಜ್ಯಪಾಲರು. 
ಜಿಲ್ಲಾ ಸುದ್ದಿ

ಕೆಪಿಎಸ್‌ಸಿ ನೇಮಕಕ್ಕೆ ಅಡ್ಡಿ

ಸರ್ಕಾರ ವಿವರಣೆ ನೀಡಿದರೂ ಅಂಕಿತ ಹಾಕುತ್ತಾರಾ, ಇಲ್ಲವಾ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ...

ಬೆಂಗಳೂರು: ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಸಂಬಂಧ ಸರ್ಕಾರದ ಪ್ರಸ್ತಾಪಕ್ಕೆ ಕಂಟಕ ಎದುರಾಗಿದ್ದು, ಪಟ್ಟಿಯಲ್ಲಿನ ವ್ಯಕ್ತಿಗಳ ಬಗ್ಗೆ ರಾಜ್ಯಪಾಲರು ಕೆಲ ಸ್ಪಷ್ಟೀಕರಣ ಕೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ರಾಜ್ಯಪಾಲರನ್ನು ಶುಕ್ರವಾರ ಭೇಟಿ ಮಾಡಿ ಶಿಫಾರಸ್ಸನ್ನು ಒಪ್ಪುವಂತೆ ಮನವಿ ಮಾಡಿದ್ದರು. ಆದರೆ ಅದೇ ದಿನ ಸಾಯಂಕಾಲ ರಾಜಭವನದಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಕಚೇರಿಗೆ ಸ್ಪಷ್ಟೀಕರಣ ಕೇಳಿದ ಪತ್ರ ರವಾನೆಯಾಗಿತ್ತು. ಇದಕ್ಕೆ ಸರ್ಕಾರ ಶನಿವಾರ ಸಂಜೆಯೇ  ಸ್ಪಷ್ಟೀಕರಣ ಕಳುಹಿಸಿದೆ.

ಅಧ್ಯಕ್ಷ ಸ್ಥಾನಕ್ಕೆ ಶಿಫಾರಸುಗೊಂಡ ವಿ.ಆರ್.ಸುದರ್ಶನ್ ಸದಸ್ಯರಾದ ರಫುನಂದನ್ ರಾಮಣ್ಣ, ಗೋವಿಂದಯ್ಯ ಬಗ್ಗೆ ಇನ್ನಷ್ಟು ಮಾಹಿತಿ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಇದರೊಂದಿಗೆ ಕೆಪಿಎಸ್‌ಸಿ ನೇಮಕ ಪ್ರಕ್ರಿಯೆಗೆ ಕಾನೂನು ಮತ್ತು ರಾಜಕೀಯ ಅಡ್ಡಿ ಏಕಕಾಲಕ್ಕೆ ಅಂಟಿಕೊಂಡಿದ್ದು, ಸರ್ಕಾರದಿಂದ ಸ್ಪಷ್ಟೀಕರಣ ವರದಿ ಸಲ್ಲಿಕೆಯಾಗುವವರೆಗೆ ರಾಜ್ಯಪಾಲರು ಅಂಕಿತ ಹಾಕುವುದಿಲ್ಲ. ಸರ್ಕಾರ ವಿವರಣೆ ನೀಡಿದರೂ ಅಂಕಿತ ಹಾಕುತ್ತಾರಾ, ಇಲ್ಲವಾ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಏಕೆ ಸ್ಪಷ್ಟೀಕರಣ: ಸರ್ಕಾರ ಶಿಫಾರಸು ಪತ್ರ ಕಳುಹಿಸಿದ ಮರುದಿನದಿಂದಲೇ ಈ ಪಟ್ಟಿಯ ಬಗ್ಗೆ ಅಪಸ್ವರ ವ್ಯಕ್ತವಾಗಿತ್ತು. ಸುದರ್ಶನ ರಾಜಕೀಯ ವ್ಯಕ್ತಿ ಎಂಬುದು ಬಿಜೆಪಿ ವಿರೋಧಕ್ಕೆ ಕಾರಣ. ಜತೆಗೆ ಪಟ್ಟಿಯಲ್ಲಿರುವ ನಾಲ್ವರ ಬಗ್ಗೆಯೂ ಆರೋಪ ಕೇಳಿಬಂದಿದ್ದವು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಟಿ.ಬಿ.ಜಯಚಂದ್ರ, ರಾಜ್ಯಪಾಲರು ಪಟ್ಟಿ ತಿರಸ್ಕರಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ರಾಜ್ಯಪಾಲರು ಸ್ಪಷ್ಟೀಕರಣ ಕೇಳುವುದು ಸಾಮಾನ್ಯ. ಆ ನಿಟ್ಟಿನಲ್ಲಿ ರಾಜಭವನದಿಂದ ಪತ್ರ ಬಂದಿರಬಹುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!