'ಅದಮ್ಯ ಚೇತನ' ಉತ್ಸವದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಇಸ್ರೋ ವಿಜ್ಞಾನಿ ವರಲ್ಮತಿ ಅವರನ್ನು ಸನ್ಮಾನಿಸುತ್ತಿರುವುದು. 
ಜಿಲ್ಲಾ ಸುದ್ದಿ

170 ಸಾಧಕ ಮಹಿಳಾ ವಿಜ್ಞಾನಿಗಳಿಗೆ ಸನ್ಮಾನ

ಭಾರತ 21ನೇ ಶತಮಾನದಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲಿದ್ದು, ದೇಶದಲ್ಲಿ ಮಹಿಳಾ ಸಶಕ್ತೀರಣದ ಅಗತ್ಯವಿದೆ..

ಬೆಂಗಳೂರು: ಭಾರತ 21ನೇ ಶತಮಾನದಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲಿದ್ದು, ದೇಶದಲ್ಲಿ ಮಹಿಳಾ ಸಶಕ್ತೀರಣದ ಅಗತ್ಯವಿದೆ ಎಂದು ರಾಜ್ಯಪಾಲ ವಿ.ಆರ್ ವಾಲಾ ಅವರು ಹೇಳಿದ್ದಾರೆ.

ಭಾನುವಾರ 'ಅದಮ್ಯ ಚೇತನ ಸೇವಾ' ಉತ್ಸವದಲ್ಲಿ 170 ಮಹಿಳಾ ವಿಜ್ಞಾನಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ದೇಶದ ಅಬಿವೃದ್ಧಿಗಾಗಿ ಸ್ತ್ರೀಶಕ್ತಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಮಹಿಳಾ ಶಕ್ತಿಯ ಸಬಲೀಕರಣಕ್ಕೆ ಒತ್ತು ನೀಡಬೇಕು. ಶೇ.85 ರಷ್ಟು ಪುರುಷರು ಶಿಸ್ತನ್ನು ಉಲ್ಲಂಘಿಸುತ್ತಾರೆ. ನಾರಿಯರು ಶಿಸ್ತಿನಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಯಾವುದೇ ಸಂಸ್ಥೆ ಉನ್ನತೀಕರಣದತ್ತ ಸಾಗಬೇಕೆಂದರೆ ಮಾತೃ ಶಕ್ತಿಯನ್ನು ಬಳಸಿಕೊಳ್ಳಬೇಕು. ಮಹಿಳೆಯರಲ್ಲಿ ಬುದ್ಧಿಮತ್ತೆಗೇನೂ ಕೊರತೆ ಇಲ್ಲ. ಆದರೆ, ಅದನ್ನು ಪ್ರೋತ್ಸಾಹಿಸಿ ಬಳಸಿಕೊಳ್ಳಬೇಕಿರುವ ಕೆಲಸವಾಗಬೇಕಿದೆ. ಈಗಾಗಲೇ ಅವರು ಚಂದ್ರಯಾನ, ಮಂಗಳಯಾನ, ರೇಡಾರ್ ತಯಾರಿಕೆಯಲ್ಲಿ ತಮ್ಮ ತಾಂತ್ರಿಕ ಸಾಮರ್ಥ್ಯ ತೋರಿಸಿ ಯಶ ಕಂಡಿದ್ದಾರೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಎಡಿಎ, ಇಸ್ರೋ, ಡಿಆರ್ಡಿಒ ಹಾಗೂ ಎನ್ಎಎಲ್ ಮತ್ತಿತರ ಸಂಸ್ಥೆಗಳ ಮಹಿಳಾ ವಿಜ್ಞಾನಿಗಳನ್ನು ಸನ್ಮಾನಿಸಲಾಯಿತು. ಕೇಂದ್ರ ಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯೆ ತಾರಾ, ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತ್ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT