ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ 
ಜಿಲ್ಲಾ ಸುದ್ದಿ

ಇವತ್ತು ಕಿಸ್ ಡೇ, ನಾಳೆ ಸ್ಲೀಪಿಂಗ್ ಡೇ

ಈ ಬಗ್ಗೆ ಕ್ರಮ ತಗೊಳ್ಳಿ ಅಂದ್ರೆ ಮುಖ್ಯಮಂತ್ರಿ, ಗೃಹ ಸಚಿವ ಜಾರ್ಜ್ ಕಾನೂನು ಕ್ರಮ ತಗೋತೀವಿ ಅಂತಾರೆ...

ಶಿವಮೊಗ್ಗ: ಇವತ್ತು ಕಿಸ್ ಡೇ ಮಾಡ್ತೀವಿ ಅಂತಾರೆ. ಮುಂದೆ ಸ್ಲೀಪಿಂಗ್ ಡೇ ಮಾಡ್ತೀವಿ ಅಂತಾರೆ. ಅದನ್ನೆಲ್ಲಾ ನೋಡಿಕೊಂಡು ಸುಮ್ಮನಿರಲು ಸಾಧ್ಯವೇ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು.

ಈ ಬಗ್ಗೆ ಕ್ರಮ ತಗೊಳ್ಳಿ ಅಂದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಾರ್ಜ್ ಕಾನೂನು ಕ್ರಮ ತಗೋತೀವಿ ಅಂತಾರೆ.

ಅವರ ಕುಟುಂಬದವರು ಇದರಲ್ಲಿದ್ದರೆ ಸುಮ್ಮನಿರುತ್ತಿದ್ರಾ ಎಂದು ಪ್ರಶ್ನಿಸಿದರು. ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಭಾನುವಾರ ಹಿಂದೂ ಧರ್ಮ ಜಾಗೃತಿ ಸಮಿತಿ ಆಯೋಜಿಸಿದ್ದ ಹಿಂದೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿಂದೂ ಧರ್ಮ, ಹಿಂದೂ ಸಂಸ್ಕೃತಿ ಉಳಿಸಲು ಹೋರಾಟ ಮಾಡಿದ್ದಕ್ಕೆ ತಮ್ಮ ಮೇಲೆ ಇದುವರೆಗೂ 92 ಕೇಸ್ ದಾಖಲಾಗಿದ್ದು ಶೀಘ್ರವೇ ಇದು 100 ಆಗಲಿದೆ. ಆದರೆ ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ.

ಇನ್ನೂ ಮುಖ್ಯಮಂತ್ರಿಗಳು ಶ್ರೀರಾಮ ಸೇನೆಯನ್ನು ಬ್ಯಾನ್ ಮಾಡುತ್ತೇನೆ ಎನ್ನುತ್ತಾರೆ. ಆದರೆ ಸೇನೆಯನ್ನು ನಿಷೇಧಿಸುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಮ್ಮ ಹೆಸರಿನಲ್ಲೇ ರಾಮ ಇದ್ದಾನೆ ಎಂದು ಗೊತ್ತಾಗಲಿ ಎಂದು ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದ್ದು ಎಂದ ಖರ್ಗೆ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

SCROLL FOR NEXT