ಮಂಗಳೂರಿನಲ್ಲಿ ಹತ್ಯೆಯಾದ ಕೇಶವ್ ಶೆಟ್ಟಿ 
ಜಿಲ್ಲಾ ಸುದ್ದಿ

ಗಾಂಜಾ ಮಾಫಿಯಾ ಬಗ್ಗೆ ಮಾಹಿತಿ ನೀಡಿದವನ ಬರ್ಬರ ಹತ್ಯೆ

ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಗ್ಯಾರೇಜ್ ಮಾಲೀಕನ ಹತ್ಯೆಗೈದಿರುವ ಘಟನೆ ಮಂಗಳೂರಿನ...

ಮಂಗಳೂರು: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಗ್ಯಾರೇಜ್ ಮಾಲೀಕನ ಹತ್ಯೆಗೈದಿರುವ ಘಟನೆ ಮಂಗಳೂರಿನ ಸೂರಿಂಜೆ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೂರಿಂಜೆ ಸಮೀಪ ಬೆಳ್ಳಂಬೆಳಗ್ಗೆ ಶೆಟಲ್ ಕಾಕ್ ಆಡಲು ಆಟದ ಮೈದಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕೇಶವ್ ಶೆಟ್ಟಿ(34)ಯನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಚ್ಚು, ಲಾಂಗುಗುಳಿಂದ ಮನಸೋ ಇಚ್ಚೆ ದಾಳಿ ಮಾಡಿ ಪರಾರಿಯಾಗಿದ್ದಾರೆ.

ದಾಳಿಯಿಂದಾಗಿ ಕೇಶವಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ಸಣ್ಯ ಗ್ಯಾರೇಜ್ ಇಟ್ಟುಕೊಂಡಿದ್ದ ಕೇಶವ್ ಶೆಟ್ಟಿ ಇತ್ತೀಚೆಗಷ್ಟೆ, ಸೂರತ್ಕಲ್ ಸುತ್ತಮುತ್ತ ಹೆಚ್ಚಾಗಿರುವ ಗಾಂಜಾ ಮಾರಾಟದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ದುಷ್ಕರ್ಮಿಗಳನ್ನು ಆತನನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಕೇಶವ್ ಶೆಟ್ಟಿ ಹತ್ಯೆ ಹಿಂದೇ ಗಾಂಜಾ ಮಾಫಿಯಾದ ಕೈವಾಡವಿರುವ ಗುಮಾನಿ ಎದುರಾಗಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT