ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ 
ಜಿಲ್ಲಾ ಸುದ್ದಿ

ಕೆಪಿಎಸ್‌ಸಿ ಶಿಫಾರಸು ವಾಪಸ್ ಪಡೆಯಿರಿ

ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕೆಪಿಎಸ್‌ಸಿ ನೇಮಕಕ್ಕೆ...

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕೆಪಿಎಸ್‌ಸಿ ನೇಮಕಕ್ಕೆ ಮಾಡಿರುವ ಶಿಫಾರಸನ್ನು ವಾಪಸ್ ಪಡೆಯಬೇಕು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ಕೋರ್ಟ್ ಆದೇಶವನ್ನು ಪಾಲನೆಗಾಗಿ ಮುಖ್ಯಮಂತ್ರಿಯವರೇ ಸ್ವಯಂ ಪ್ರೇರಿತವಾಗಿ ಶಿಫಾರಸನ್ನು ವಾಪಸ್ ಪಡೆಯಬೇಕು. ಸದಸ್ಯರ ನೇಮಕಕ್ಕೆ ಶೋಧನಾ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾವು ಮಂಗಳಾ ಶ್ರೀಧರ್ ಅವರನ್ನು ನೇಮಕ ಮಾಡಿದ್ದಾಗ 2013ರ ಸುಪ್ರೀಂ ಕೋರ್ಟ್ ಆದೇಶ ಇರಲಿಲ್ಲ. ಮಂಗಳಾ ಶ್ರೀಧರ್ ನೇಮಕವನ್ನು ಹೈಕೋರ್ಟ್ ಪ್ರಶ್ನಿಸಿ ರಾಜಕೀಯದವರನ್ನು ಏಕೆ ನೇಮಕ ಮಾಡಿದ್ದೀರಿ ಎಂದಿದೆ.

ಹಾಗಾಗಿ ರಾಜಕೀಯ ನಾಯಕರ ನೇಮಕ ಸರಿಯಲ್ಲ. ಹಿಂದೆ, ವಿ.ಸೋಮಣ್ಣ ಅವರನ್ನು ಪರಿಷತ್‌ಗೆ ನೇಮಿಸುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಯಾವುದೇ ತೀರ್ಪು ಇಲ್ಲದಿದ್ದರೂ ತಿರಸ್ಕರಿಸಿದ್ದರು. ಆದರೆ, ಈಗ ಕೋರ್ಟ್ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ಶಿಫಾರಸು ಮಾಡಿರುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT