ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸ್ಪೈಸ್‌ಜೆಟ್ ಹಾರಾಟ ಹುಬ್ಬಳ್ಳಿಗೆ ಶಿಫ್ಟ್

ಕುಂದಾನಗರಿಯ ವಿಮಾನಯಾನಿಗಳಿಗೊಂದು ಬೇಸರದ ಸುದ್ದಿ. ಸಾಂಬ್ರಾ ವಿಮಾನ ನಿಲ್ದಾಣದಿಂದ...

ಬೆಳಗಾವಿ: ಕುಂದಾನಗರಿಯ ವಿಮಾನಯಾನಿಗಳಿಗೊಂದು ಬೇಸರದ ಸುದ್ದಿ. ಸಾಂಬ್ರಾ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ಕಂಪನಿಯ ವೈಮಾನಕ ಸೇವೆ ಇನ್ನು ಕೆಲವೇ ದಿನ ಮಾತ್ರ. ಆ ನಂತರ ಈ ನಿಲ್ದಾಣ ಮತ್ತೆ ವಾಯುಪಡೆ ಯೋಧರ ತರಬೇತಿಗೆ ಹಾಗೂ ಆಗೀಗ ಆಗಮಿಸುವ ಗಣ್ಯರ ವಿಮಾನ ಇಳಿಯಲು ಮಾತ್ರ ಸೀಮಿತಗೊಳ್ಳಲಿದೆ.

ಎರಡು ವರ್ಷ ಹಿಂದಷ್ಟೇ ಸಾಂಬ್ರಾ ವಿಮಾನ ನಿಲ್ದಾಣದಿಂದ (2012 ನವೆಂಬರ್ 22) ಸ್ಪೈಸ್‌ಜೆಟ್ ಬೆಂಗಳೂರು, ಮುಂಬೈಗಳಿಗೆ ವಿಮಾನ ಸೇವೆ ಪ್ರಾರಂಭಿಸಿತ್ತು. ಆ ಸೇವೆ ಇದೇ ಜನವರಿ 15 ರಂದು ಸ್ಥಗಿತಗೊಳ್ಳಲಿದೆ. ಆದರೆ, ಜ.16ರಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಪುನಾರಂಭವಾಗಲಿದೆ.

ಹುಬ್ಬಳ್ಳಿಯಿಂದ ಕಾರ್ಯ ನಿರ್ವಹಿಸಿದಲ್ಲಿ ಸುತ್ತಮುತ್ತಲಿನ ನಗರ, ಪಟ್ಟಣಗಳಿಂದ ಹೆಚ್ಚಿನ ಪ್ರಯಾಣಿಕರು ಸಿಗುತ್ತಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ವಹಣೆ ಕಾಮಗಾರಿ ಇದ್ದುದರಿಂದ ಅಲ್ಲಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಕಾರ್ಯ ನಿರ್ವಹಿಸಲಾಗುತ್ತಿತ್ತು.

ಇದೀಗ ಮತ್ತೆ ಹುಬ್ಬಳ್ಳಿಯಿಂದಲೇ ವಿಮಾನ ಯಾನ ಆರಂಭಿಸಲಾಗುವುದು ಎಂದು ಸ್ಪೈಸ್ ಜೆಟ್ ಕಂಪನಿಯ ಅಧಿಕಾರಿ ತಿಳಿಸಿದ್ದಾರೆ.

ಕಾಮಗಾರಿ ನನೆಗುದಿಗೆ
ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ ಭಾರತೀಯ ವಿಮಾನಯಾನ ಪ್ರಾಧಿಕಾರ (141.87ಕೋಟಿ) ಮತ್ತು ರಕ್ಷಣಾ ಇಲಾಖೆ (151.48 ಕೋಟಿ) ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಕೇಂದ್ರ ಸಕಾಂರ 293.35 ಕೋಟಿ ಅನುದಾನ ಮಂಜೂರು ಮಾಡಿದ್ದರೂ ನಿಲ್ದಾಣದ ರನ್‌ವೇಯನ್ನು 1830 ಮೀಟರ್‌ಗೆ ವಿಸ್ತರಿಸುವ ಹಾಗೂ 45 ಮೀಟರ್ ಅಗಲೀಕರಣಗೊಳಿಸುವ ಕಾಮಗಾರಿ ನನೆಗುದಿಗೆ ಬಿದ್ದಿದೆ.

ಬೆಳಗಾವಿಯಿಂದ ವಿಮಾನ ಓಡಿಸದಿರಿವ ನಿರ್ಧಾರ ಸ್ಪೈಸ್‌ಜೆಟ್ ಕಂಪನಿಯದ್ದು, ಲಾಭ ನಷ್ಟದ ಆಧಆರದಲ್ಲಿ ಅವರು ನಿರ್ಧಾರ ಕೈಗೊಳ್ಳುತ್ತಾರೆ. ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆ ಕೊನೆ ಹಂತದಲ್ಲಿ ಇದ್ದು, ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಕಾಮಗಾರಿ ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗುವ ನಿರೀಕ್ಷೆ ಇದೆ.

ಈಶ್ವರಪ್ಪ,
ವಿಮಾನ ನಿಲ್ದಾಣ ಪ್ರಾಧಿಕಾರದ ಡಿಜಿಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

SCROLL FOR NEXT