ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಟನೆ 
ಜಿಲ್ಲಾ ಸುದ್ದಿ

ಪಿಯುಗೆ ಬ್ಲೋ-ಅಪ್ ಸಿಲೇಬಸ್ ಬಳಕೆ

ಉಪನ್ಯಾಸಕ ವರ್ಗ ತರಗತಿಗಳನ್ನು ಬಹಿಷ್ಕಾರ ಹಾಕುವ ಎಚ್ಚರಿಕೆ...

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗಕ್ಕೆ ಈ ಬಾರಿ ಬ್ಲೋ-ಅಪ್ ಸಿಲೆಬಸ್ ಬಳಸುತ್ತೇವೆ ಹಾಗೂ ಪೂರ್ಣ ಪಠ್ಯಪುಸ್ತಕ ಆಧರಿಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಮಾಧ್ಯಮ ಹಾಗೂ ವಿದ್ಯಾರ್ಥಿ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿ.31ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಪೂರ್ಣ ಪಠ್ಯವಸ್ತು ಪೂರ್ವ ಸಿದ್ದತೆ ಅಥವಾ ವಾರ್ಷಿಕ ಪರೀಕ್ಷೆಗೆ ಪರಿಗಣಿಸುವುದಿಲ್ಲ.

ಆದರೆ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ಣ ಪಠ್ಯಪುಸ್ತಕ ಆಧರಿಸಿಯೇ ಪರೀಕ್ಷೆ ನಡೆಸುವುದಾಗಿ ಮಂಗಳವಾರ ಹೊರಡಿಸಿದ ಆದೇಶದಲ್ಲಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ನಿದ್ದೆಗೆಡಿಸಿದ ಪಪೂ ಇಲಾಖೆ ಎಂಬ ವರದಿಯು ಜ.4ರಂದು ವರದಿಯಾಗಿತ್ತು. ಆ ಬಳಿಕ ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದಿದ್ದವು. ಆದರೆ ತನ್ನ ಮೊಂಡುತನ ಮುಂದುವರಿಸಿದ್ದ ಶಿಕ್ಷಣ ಇಲಾಖೆ, ಬ್ಲೋ-ಅಪ್ ಸಿಲೇಬಸ್ ಬಳಸದಿರಲು ನಿರ್ಧರಿಸಿತ್ತು. ಆದರೆ ಉಪನ್ಯಾಸಕ ವರ್ಗ ತರಗತಿಗಳನ್ನು ಬಹಿಷ್ಕಾರ ಹಾಕುವ ಎಚ್ಚರಿಕೆ ಹಾಕಿದ ಪರಿಣಾಮ ಆದೇಶ ಹಿಂಪಡೆಯಲು ಹಿರಿಯ ಅಧಿಕಾರಿಗಳು ನಿರ್ಧರಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಿಂದಿನ ಕ್ರಮದಿಂದ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರ ವಿಷಯದ ಪ್ರತಿ ಅಧ್ಯಾಯದಲ್ಲಿಯೂ ನಾಲ್ಕೈದು ಅಂಶಗಳನ್ನು ವಿದ್ಯಾರ್ಥಿಗಳಿಗೆ ಕಲಿಸಿರಲಿಲ್ಲ. ಪೂರ್ವ ಸಿದ್ದತೆ ಪರೀಕ್ಷೆಗೆ ಎರಡು ವಾರವಿರುವಾಗ ನಿಯಮ ಬದಲಿಸಿದರೆ ವಿದ್ಯಾರ್ಥಿಳಿಗೆ ಸಮಸ್ಯೆಯಾಗುತ್ತಿತ್ತು.

ಶಿಕ್ಷಣ ಇಲಾಖೆ ಈ ಕ್ರಮಕ್ಕೆ ವಿದ್ಯಾರ್ಥಿ ಸಂಘಟನೆಗಳು ಸ್ವಾಗತಿಸಿವೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪೂರ್ಣ ಪಠ್ಯವಸ್ತು ಪರಿಗಣಿಸುವ ಮುಂಚೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಜತೆ ಸಮಾಲೋಚಿಸುವಂತೆಯೂ ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT