ಕೆಪಿಎಸ್‌ಸಿ ಅಧ್ಯಕ್ಷರು ಹಾಗೂ ಸದಸ್ಯರ ಶಿಫಾರಸು ವಿವಾದ ಲೋಕಾಯುಕ್ತ ಅಂಗಳಕ್ಕೆ 
ಜಿಲ್ಲಾ ಸುದ್ದಿ

ಲೋಕಾಯುಕ್ತ ಅಂಗಳಕ್ಕೆ ಕೆಪಿಎಸ್‌ಸಿ ವಿವಾದ

ರಾಜ್ಯಪಾಲರ ಪತ್ರಕ್ಕೆ ಪ್ರತಿಯಾಗಿ ಕೌಶಿಕ್ ಮುಖರ್ಜಿ ನೀಡಿರುವ ಉತ್ತರ ಈಗ ವಿವಾದಕ್ಕೆ ಕಾರಣವಾಗಿದೆ...

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಶಿಫಾರಸು ವಿವಾದವೀಗ ಲೋಕಾಯುಕ್ತ ಅಂಗಳಕ್ಕೆ ಬಂದಿದೆ.

ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿರುವ ವಿವಾದವು ರಾಜ್ಯ ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ರಾಜ್ಯಪಾಲರ ಪತ್ರಕ್ಕೆ ಪ್ರತಿಯಾಗಿ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ನೀಡಿರುವ ಉತ್ತರ ಈಗ ವಿವಾದಕ್ಕೆ ಕಾರಣವಾಗಿದೆ.

ಯಾವುದೇ ಅಧಿಕೃತ ವಿಚಾರಣೆ ನಡೆಸದೆ ವಿಚಕ್ಷಣ ದಳದಿಂದ ಶಿಫಾರಸು ಪಟ್ಟಿಯಲ್ಲಿರುವ 8 ಜನರಿಗೆ ನಿರಾಕ್ಷೇಪಣೆ ಪತ್ರ ಕಳುಹಿಸಲಾಗಿದೆ. ಈ ಮೂಲಕ ರಾಜ್ಯಪಾಲ ಆಕ್ಷೇಪಣೆಗಳನ್ನು ಮುಖ್ಯ ಕಾರ್ಯದರ್ಶಿ ಅವರು ಹಾಸ್ಯ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ವಿರುದ್ಧ ಐಪಿಸಿ ಸೆಕ್ಷನ್ 167, 409 ಹಾಗೂ 420ರ ಮೂಲಕ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ರಾಜ್ಯಪಾಲರ ಸೂಚನೆ ಪ್ರಕಾರ ಯಾವುದೇ ಸದಸ್ಯರ ಹೆಸರನ್ನು ಶಿಫಾರಸು ಮಾಡುವ ಮುಂಚೆ ವಿಚಕ್ಷಣ ದಳ ಹಾಗೂ ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸಬೇಕು. ಆ ವ್ಯಕ್ತಿಯ ಹಿನ್ನೆಲೆ ಹಾಗೂ ಆರೋಪಗಳಿಗೆ ಸಂಬಂಧಿಸಿ ನಿರಾಕ್ಷೇಪಣೆ ಪತ್ರ ನೀಡಬೇಕು.

ಆದರೆ ಈ ಪ್ರಕರಣದಲ್ಲಿ ಲೋಕಾಯುಕ್ತರಿಗೆ ರಾಜ್ಯ ಸರ್ಕಾರ ಯಾವುದೇ ಪತ್ರವನ್ನೇ ಬರೆದಿಲ್ಲ. ಈ ವಿಷಯವನ್ನು ಸ್ವತಃ ಲೋಕಾಯುಕ್ತರೇ ಸ್ಪಷ್ಟಪಡಿಸಿದ್ದಾರೆ. ಆದರೆ ಯಾವುದನ್ನೂ ಗಂಭೀರವಾಗಿ ಪರಿಗಣಿಸದ ಮುಖ್ಯ ಕಾರ್ಯದರ್ಶಿ, ತಾವೇ ಸ್ವತಃ ವಿಚಕ್ಷಣ ವರದಿ ತಯಾರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದಾರೆ.

ಎಲ್ಲ ಎಂಟು ಜನರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆದರೆ ಈ 8 ಜನರಲ್ಲಿ ಸೈಯದ್ ಉಲ್ಫಾತ್ ಹುಸೇನ್, ಪ್ರೋ.ಗೋವಿಂದಯ್ಯ ಹಾಗೂ ಡಾ.ರವಿಕುಮಾರ್ ಅವರ ಮೇಲೆ ಗಂಭೀರ ಆರೋಪಗಳಿದ್ದರೂ ನಿರಾಕ್ಷೇಪಣೆ ಪತ್ರ ಸಲ್ಲಿಸಲಾಗಿದೆ. ಸ್ವಯಂಪ್ರೇರಿತವಾಗಿ ಮುಖ್ಯ ಕಾರ್ಯದರ್ಶಿಗಳು ನಿರಾಕ್ಷೇಪಣೆ ಪತ್ರ ನೀಡಿದ್ದಾರೆ.

ದುರುದ್ದೇಶ ಪೂರ್ವಕವಾಗಿ ಹೀಗೆ ಕಾರ್ಯನಿರ್ವಹಿಸಿರುವುದು ನಾನಾ ಸಂದೇಹಗಳಿಗೆ ಎಡೆಮಾಡಿಕೊಟ್ಟಿದೆ. ರಾಜ್ಯ ಸರ್ಕಾರ ಕೂಡ ಕಳಂಕಿತರ ಪರವಾಗಿರುವುದು ಸಾಭೀತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮುಖ್ಯ ಕಾರ್ಯದರ್ಶಿ ವಿರುದ್ಧ ದಾಖಲೆ ತಿದ್ದಿದ ಹಾಗೂ ಸಾರ್ವಜನಿಕರಿಗೆ ವಂಚನೆ ಮಾಡಿದ ಆರೋಪ ಹೊರೆಸಿ ವಿಚಾರಣೆ ನಡೆಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT