ಬಿಜಿಎಸ್ ಗ್ಲೋಬಲ್ ಆಸ್ಪತ್ರೆ 
ಜಿಲ್ಲಾ ಸುದ್ದಿ

ಪ್ರಾಣ ಉಳಿಸಲು ಗ್ರೀನ್ ಚಾನೆಲ್: ಬಿಜಿಎಸ್ ನೂತನ ಸೇವೆ

ಬೆಂಗಳೂರು: ಅಪಘಾತಗಳಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವಿಶೇಷ ಗ್ರೀನ್ ಚಾನೆಲ್ ಆಡ್ಮಿಷನ್ ಪ್ರೊಸೆಸ್ ಎಂಬ ನೂತನ ಸೇವೆಯನ್ನು ಆರಂಭಿಸಿದೆ.

ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆಯಲ್ಲಿ ಗಾಯಾಳುವಿಗೆ ತುರ್ತು ಚಿಕಿತ್ಸೆ ನೀಡುವುದು ಹಾಗೂ ಆತನ ಜೀವ ಉಳಿಸುವುದು ಇದರ ಉದ್ದೇಶ. ಈಗಾಗಲೇ ಸೇವೆ ಆರಂಭವಾಗಿದ್ದು, ಕಳೆದ ನಾಲ್ಕು ತಿಂಗಳಲ್ಲಿ 41 ಜನರ ಜೀವ ಉಳಿಸಲಾಗಿದೆ. ಇಂತಹ ಯೋಜನೆಗೆ ನಗರ ಸಂಚಾರ ಪೊಲೀಸರೂ ಈಗ ಕೈಜೋಡಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎನ್.ಕೆ ವೆಂಕಟರಮಣ, ಅಪಘಾತದಲ್ಲಿ ಬಡವ, ಶ್ರೀಮಂತ ಯಾರೇ ಗಾಯಗೊಳ್ಳಲಿ ಅವರನ್ನು ಆಸ್ಪತ್ರೆಗೆ ಕರೆತಂದ ತಕ್ಷಣ ಚಿಕಿತ್ಸೆ ನೀಡುವುದು, ಅವರನ್ನು ಪ್ರಾಣಾಪಾಯದಿಂದ ಪಾರು ಮಾಡುವುದು ಗ್ರೀನ್ ಚಾನೆಲ್ ಉದ್ದೇಶ ಎಂದರು.

ಅಪಘಾತವಾದ ಮೊದಲ 1 ಗಂಟೆಯ ಸುವರ್ಣ ಸಮಯದಲ್ಲಿ ಗಾಯಾಳುಗಳಿಗೆ ಉತ್ತಮ ಸೇವೆ ನೀಡಿ ಜೀವ ಉಳಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ತುರ್ತು ಹಾಗೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು. ತುರ್ತು ಚಿಕಿತ್ಸೆಗೆ ದೇಣಿಗೆ ಸಂಗ್ರಹಿಸುವ ಅಭಿಯಾನಕ್ಕೆ ಇದೇ ವೇಳೆ ಚಾಲನೆ ನೀಡಿದರು.

ರು. 1 ನೀಡಿ: ಬಿಜಿಎಸ್ ಆಸ್ಪತ್ರೆ ಜತೆಗೆ ನಗರದ ಇತರೆ ಆಸ್ಪತ್ರೆಗಳೂ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು ಎಂದ ಅವರು, ನಗರದ ಪ್ರತಿಯೊಬ್ಬರೂ ರು. 1 ನೀಡಿದರೆ ಬಡಜನರಿಗೆ ಅನುಕೂಲವಾಗುತ್ತದೆ. ಬಡರೋಗಿಗಳಿಗೆ ನೆರವು ನೀಡುತ್ತಿರುವ ಧನ್ವಂತರಿ ಚಾರಿಟಬಲ್ ಟ್ರಸ್ಟ್‌ಗೆ ಪ್ರತಿಯೊಬ್ಬರೂ ದೇಣಿಗೆ ನೀಡಿದರೆ ಚಿಕಿತ್ಸೆ ಸಾಧ್ಯವಾಗುತ್ತದೆ ಎಂದರು. ದಾನಿಗಳು 080 3044 4444ನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT