ಬಿಜಿಎಸ್ ಗ್ಲೋಬಲ್ ಆಸ್ಪತ್ರೆ 
ಜಿಲ್ಲಾ ಸುದ್ದಿ

ಪ್ರಾಣ ಉಳಿಸಲು ಗ್ರೀನ್ ಚಾನೆಲ್: ಬಿಜಿಎಸ್ ನೂತನ ಸೇವೆ

ಬೆಂಗಳೂರು: ಅಪಘಾತಗಳಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವಿಶೇಷ ಗ್ರೀನ್ ಚಾನೆಲ್ ಆಡ್ಮಿಷನ್ ಪ್ರೊಸೆಸ್ ಎಂಬ ನೂತನ ಸೇವೆಯನ್ನು ಆರಂಭಿಸಿದೆ.

ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆಯಲ್ಲಿ ಗಾಯಾಳುವಿಗೆ ತುರ್ತು ಚಿಕಿತ್ಸೆ ನೀಡುವುದು ಹಾಗೂ ಆತನ ಜೀವ ಉಳಿಸುವುದು ಇದರ ಉದ್ದೇಶ. ಈಗಾಗಲೇ ಸೇವೆ ಆರಂಭವಾಗಿದ್ದು, ಕಳೆದ ನಾಲ್ಕು ತಿಂಗಳಲ್ಲಿ 41 ಜನರ ಜೀವ ಉಳಿಸಲಾಗಿದೆ. ಇಂತಹ ಯೋಜನೆಗೆ ನಗರ ಸಂಚಾರ ಪೊಲೀಸರೂ ಈಗ ಕೈಜೋಡಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎನ್.ಕೆ ವೆಂಕಟರಮಣ, ಅಪಘಾತದಲ್ಲಿ ಬಡವ, ಶ್ರೀಮಂತ ಯಾರೇ ಗಾಯಗೊಳ್ಳಲಿ ಅವರನ್ನು ಆಸ್ಪತ್ರೆಗೆ ಕರೆತಂದ ತಕ್ಷಣ ಚಿಕಿತ್ಸೆ ನೀಡುವುದು, ಅವರನ್ನು ಪ್ರಾಣಾಪಾಯದಿಂದ ಪಾರು ಮಾಡುವುದು ಗ್ರೀನ್ ಚಾನೆಲ್ ಉದ್ದೇಶ ಎಂದರು.

ಅಪಘಾತವಾದ ಮೊದಲ 1 ಗಂಟೆಯ ಸುವರ್ಣ ಸಮಯದಲ್ಲಿ ಗಾಯಾಳುಗಳಿಗೆ ಉತ್ತಮ ಸೇವೆ ನೀಡಿ ಜೀವ ಉಳಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ತುರ್ತು ಹಾಗೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು. ತುರ್ತು ಚಿಕಿತ್ಸೆಗೆ ದೇಣಿಗೆ ಸಂಗ್ರಹಿಸುವ ಅಭಿಯಾನಕ್ಕೆ ಇದೇ ವೇಳೆ ಚಾಲನೆ ನೀಡಿದರು.

ರು. 1 ನೀಡಿ: ಬಿಜಿಎಸ್ ಆಸ್ಪತ್ರೆ ಜತೆಗೆ ನಗರದ ಇತರೆ ಆಸ್ಪತ್ರೆಗಳೂ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು ಎಂದ ಅವರು, ನಗರದ ಪ್ರತಿಯೊಬ್ಬರೂ ರು. 1 ನೀಡಿದರೆ ಬಡಜನರಿಗೆ ಅನುಕೂಲವಾಗುತ್ತದೆ. ಬಡರೋಗಿಗಳಿಗೆ ನೆರವು ನೀಡುತ್ತಿರುವ ಧನ್ವಂತರಿ ಚಾರಿಟಬಲ್ ಟ್ರಸ್ಟ್‌ಗೆ ಪ್ರತಿಯೊಬ್ಬರೂ ದೇಣಿಗೆ ನೀಡಿದರೆ ಚಿಕಿತ್ಸೆ ಸಾಧ್ಯವಾಗುತ್ತದೆ ಎಂದರು. ದಾನಿಗಳು 080 3044 4444ನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT