ಮಾಜಿ ಶಾಸಕ ಎಟಿ ರಾಮಸ್ವಾಮಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಶಾಂತಿನಗರ ಹೌಸಿಂಗ್ ಸೊಸೈಟಿ ಹಗರಣ ದೊಡ್ಡ ಹಗರಣಗಳಲ್ಲಿ ಒಂದು: ಎಟಿ ರಾಮಸ್ವಾಮಿ

ದೇಶದಲ್ಲೇ ದೊಡ್ಡ ಹಗರಣಗಳೆಂದು ಹೇಳಲಾಗುತ್ತಿರುವ ಶಾರದಾ ಚಿಟ್ ಫಂಡ್ ಹಗರಣ ಮತ್ತು...

ಬೆಂಗಳೂರು: ದೇಶದಲ್ಲೇ ದೊಡ್ಡ ಹಗರಣಗಳೆಂದು ಹೇಳಲಾಗುತ್ತಿರುವ ಶಾರದಾ ಚಿಟ್ ಫಂಡ್ ಹಗರಣ ಮತ್ತು ಆದರ್ಶ ಹೌಸಿಂಗ್ ಹಗರಣಗಳಿಗಿಂತಲೂ ಭಾರಿ ಪ್ರಮಾಣದ ಹಗರಣ ಕರ್ನಾಟಕದಲ್ಲಿ ನಡೆದಿದೆ ಎಂದು ಮಾಜಿ ಶಾಸಕ ಎಟಿ ರಾಮಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಮಸ್ವಾಮಿ ಅವರು, ಶಾಂತಿನಗರ ಗೃಹ ನಿರ್ಮಾಣ ಸೊಸೈಟಿ ಹಗರಣವು ಕರ್ನಾಟಕದ ಅತಿದೊಡ್ಡ ಹಗರಣವಾಗಿದೆ. ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್ ಹಗರಣ ಮತ್ತು ಮಹಾರಾಷ್ಟ್ರದ ಆದರ್ಶ ಹೌಸಿಂಗ್ ಹಗರಣಗಳಿಗಿಂತಲೂ ಭಾರಿ ಪ್ರಮಾಣದಲ್ಲಿ ಶಾಂತಿನಗರ ಗೃಹ ನಿರ್ಮಾಣ ಸೊಸೈಟಿ ಹಗರಣದಲ್ಲಿ ಅಕ್ರಮವೆಸಗಲಾಗಿದೆ ಎಂದು ಅವರು ಹೇಳಿದರು.

ಹಗರಣ ಸಂಬಂಧ 2 ಸಂಘಗಳ ಬ್ಯಾಂಕ್ ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು. ಕೆಲ ವ್ಯಕ್ತಿಗಳು ಅಕ್ರಮವಾಗಿ ಸೈಟ್ ಪಡೆದಿದ್ದು, ಸರ್ಕಾರ ಮಾತ್ರ ಈ ಬಗ್ಗೆ ಅರಿವಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಗರಣದಲ್ಲಿ ಸುಮಾರು 1,456 ಕೋಟಿ ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದ್ದು, ನೈಜ ಮತ್ತು ಬೋಗಸ್ ಸಂಸ್ಥೆಗಳ ವಿರುದ್ಧ ತನಿಖೆಯಾಗಬೇಕು ಎಂದು ರಾಮಸ್ವಾಮಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಸ್ವತಂತ್ರ್ಯ ಹೊರಾಟಗಾರ ಎಚ್‌ಎಸ್ ದೊರೆಸ್ವಾಮಿ ಅವರು ಕೂಡ ಉಪಸ್ಥಿತರಿದ್ದರು.

ಸಚಿವ ಡಿಕೆಶಿಗೂ ಹಗರಣದ ನಂಟು: ರಾಮಸ್ವಾಮಿ ಆರೋಪ
ಈ ಹಿಂದೆ ಇದೇ ಶಾಂತಿನಗರ ಹೌಸಿಂಗ್ ಸೊಸೈಟಿಯಲ್ಲಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರೂ ಪಾಲುದಾರರಾಗಿದ್ದಾರೆ ಎಂದು ಆರೋಪಿಸಿದ್ದ ರಾಮಸ್ವಾಮಿ ಅವರು ಹಿರಿಯ ಸ್ವತಂತ್ರ ಹೋರಾಟಗಾರ ಎಚ್‌ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಸಹಕಾರ ಸಚಿವ ಮಹದೇವ ಪ್ರಸಾದ್ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.

ಈ ವೇಳೆ, 'ಹಗರಣದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕುಟುಂಬ ಸದಸ್ಯರ ಹೆಸರಿನಲ್ಲಿ 197 ನಿವೇಶನಗಳು ನೋಂದಣಿಯಾಗಿವೆ. ಅನಿವಾಸಿ ಭಾರತೀಯರಿಂದ ಹಿಡಿದು ಹಲವರಿಗೆ ನಿವೇಶನ ನೀಡಲಾಗಿದೆ. ಯಾವ ಕಾರಣಕ್ಕೂ ಪ್ರಕರಣ ಮುಚ್ಚಲು ಅವಕಾಶ ನೀಡಬಾರದು. ಉನ್ನತ ತನಿಖೆ ನಡೆಸಬೇಕು' ಎಂದು ರಾಮಸ್ವಾಮಿ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT