ಪ್ರಮೋದ್ ಮುತಾಲಿಕ್ 
ಜಿಲ್ಲಾ ಸುದ್ದಿ

ಇಂಡಿಯನ್ ಮುಜಾಹಿದ್ದಿನ್ ಹುಟ್ಟಿಗೆ ಬಿಜೆಪಿ ಕಾರಣ

ಹುಬ್ಬಳ್ಳಿ: ಇಂಡಿಯನ್ ಮುಜಾಹಿದೀನ್ ಸಂಘಟನೆ, ಯಾಸಿನ್ ಭಟ್ಕಳ್ ಅಂಥವರು ಹುಟ್ಟಿಕೊಳ್ಳಲು ಬಿಜೆಪಿಯೇ ಕಾರಣ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗದ ವರದಿ ಜಾರಿಗೆ ತಂದಿದ್ದೇ ಆದಲ್ಲಿ ಇಂಥ ಸಂಘಟನೆ ಹುಟ್ಟಿಕೊಳ್ಳುತ್ತಿರಲಿಲ್ಲ ಎಂದರು.

ಜಗನ್ನಾಥ ಶೆಟ್ಟಿ ಅವರು 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜತೆಗೆ ಇದನ್ನು ನಿಗ್ರಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ತಿಳಿಸಿದ್ದರು.

ಈ ಆಯೋಗ ರಚನೆಗೆ ಒತ್ತಾಯಿಸಿದ್ದೇ ಬಿಜೆಪಿ. ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಆಯೋಗದ ವರದಿ ಜಾರಿಗೆ ಇಚ್ಛಾಶಕ್ತಿ ತೋರಲಿಲ್ಲ. ಆ ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಕೂಡ ಆಯೋಗದ ವರದಿ ಜಾರಿಗೆ ಮುಂದಾಗಲಿಲ್ಲ. ಅಂದೇ ವರದಿ ಜಾರಿಗೆ ತಂದು ಕಾನೂನು ಬಿಗಿಗೊಳಿಸಿದ್ದರೆ ಬಹುಶಃ ಇಂಡಿಯನ್ ಮುಜಾಹಿದ್ದೀನ್ ಹುಟ್ಟುತ್ತಿರಲಿಲ್ಲ. ಇದಕ್ಕೆ ಬಿಜೆಪಿಯೇ ಹೊಣೆ ಎಂದರು. ವರದಿ ಜಾರಿಗೆ ಒತ್ತಾಯಿಸಿ ಶ್ರೀರಾಮ ಸೇನೆ ಭಟ್ಕಳದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಡಲು ನಿಶ್ಚಯಿಸಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!