ಪ್ರಮೋದ್ ಮುತಾಲಿಕ್ 
ಜಿಲ್ಲಾ ಸುದ್ದಿ

ಇಂಡಿಯನ್ ಮುಜಾಹಿದ್ದಿನ್ ಹುಟ್ಟಿಗೆ ಬಿಜೆಪಿ ಕಾರಣ

ಹುಬ್ಬಳ್ಳಿ: ಇಂಡಿಯನ್ ಮುಜಾಹಿದೀನ್ ಸಂಘಟನೆ, ಯಾಸಿನ್ ಭಟ್ಕಳ್ ಅಂಥವರು ಹುಟ್ಟಿಕೊಳ್ಳಲು ಬಿಜೆಪಿಯೇ ಕಾರಣ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಜಗನ್ನಾಥ ಶೆಟ್ಟಿ ಆಯೋಗದ ವರದಿ ಜಾರಿಗೆ ತಂದಿದ್ದೇ ಆದಲ್ಲಿ ಇಂಥ ಸಂಘಟನೆ ಹುಟ್ಟಿಕೊಳ್ಳುತ್ತಿರಲಿಲ್ಲ ಎಂದರು.

ಜಗನ್ನಾಥ ಶೆಟ್ಟಿ ಅವರು 1997ರಲ್ಲಿ ಭಟ್ಕಳದಲ್ಲಿ ಒಂದು ವರ್ಷ ಅಧ್ಯಯನ ಮಾಡಿ ಭಯೋತ್ಪಾದಕ, ದೇಶದ್ರೋಹಿ ಚಟುವಟಿಕೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜತೆಗೆ ಇದನ್ನು ನಿಗ್ರಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ತಿಳಿಸಿದ್ದರು.

ಈ ಆಯೋಗ ರಚನೆಗೆ ಒತ್ತಾಯಿಸಿದ್ದೇ ಬಿಜೆಪಿ. ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಆಯೋಗದ ವರದಿ ಜಾರಿಗೆ ಇಚ್ಛಾಶಕ್ತಿ ತೋರಲಿಲ್ಲ. ಆ ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಕೂಡ ಆಯೋಗದ ವರದಿ ಜಾರಿಗೆ ಮುಂದಾಗಲಿಲ್ಲ. ಅಂದೇ ವರದಿ ಜಾರಿಗೆ ತಂದು ಕಾನೂನು ಬಿಗಿಗೊಳಿಸಿದ್ದರೆ ಬಹುಶಃ ಇಂಡಿಯನ್ ಮುಜಾಹಿದ್ದೀನ್ ಹುಟ್ಟುತ್ತಿರಲಿಲ್ಲ. ಇದಕ್ಕೆ ಬಿಜೆಪಿಯೇ ಹೊಣೆ ಎಂದರು. ವರದಿ ಜಾರಿಗೆ ಒತ್ತಾಯಿಸಿ ಶ್ರೀರಾಮ ಸೇನೆ ಭಟ್ಕಳದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಡಲು ನಿಶ್ಚಯಿಸಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT