ಜಿಲ್ಲಾ ಸುದ್ದಿ

ಜಯಾ ಕೇಸ್‌ಗೆ ಸಿಂಗ್: ಅರ್ಜಿ ಸಿಜೆ ಪೀಠಕ್ಕೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಳರ ಅಕ್ರಮ ಆಶ್ತಿ ಗಳಿಕೆ ಪ್ರಕರಣ...

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಯಲ್ಲಿ ಪ್ರಾಸಿಕ್ಯೂಷನ್ ಪರ ಸರ್ಕಾರದ ವಿಶೇಷ ವಕೀಲ ಭವಾನಿ ಸಿಂಗ್ ಅವರ ಮುಂದುವರಿಕೆ ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಿದೆ.

ಪ್ರಾಸಿಕ್ಯೂಷನ್ ಪರ ಸರ್ಕಾರಿ ವಿಶೇಷ ವಕೀಲರಾದ ಭವಾನಿ ಸಿಂಗ್ ಅವರ ಮುಂದುವರಿಕೆಯನ್ನು ಆಕ್ಷೇಪಿಸಿ ಡಿಎಂಕೆ ನಾಯಕ ಅನ್ಬಳಗನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾ.ಎಸ್ ಅಬ್ದುಲ್ ನಜೀರ್ ಅವರಿದ್ದ ಏಕಸದ್ಯಸ ಪೀಠ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಹೈಕೋರ್ಟ್ ಜಯಲಲಿತಾ ಮತ್ತಿತರ ಮೂವರ ಮೇಲ್ಮನವಿ ವಿಚಾರಣೆಗೆ ವಿಶೇಷ ನ್ಯಾಯಪೀಠ ರಚಿಸಿದೆ. ಹೀಗಿರುವಾಗಿ ಈ ಆಕ್ಷೇಪಣಾ ಅರ್ಜಿಯನ್ನು ಬೇರೊಂದು ಪೀಠದಲ್ಲಿ ವಿಚಾರಣೆ ನಡೆಸುವುದು ಉಚಿತವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಈ ಕುರಿತು ಯಾವ ಪೀಠ ಅರ್ಜಿ ವಿಚಾರಣೆ ನಡೆಸಬೇಕೆಂಬುದನ್ನು ಮುಖ್ಯ ನ್ಯಾಯಮೂರ್ತಿ ಅವರ ವಿವೇಚನೆಗೆ ಒಪ್ಪಿಸಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT