ಹುಲಿ ಮರಿ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಆಹಾರ ಸಿಗದೆ 2 ಹುಲಿ ಮರಿ ಸಾವು

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಗೆ ಬರುವ ಮೇಟಿಕುಪ್ಪೆ ವಲಯದ ದಟ್ಟವಾಳು ಅರಣ್ಯ ಪ್ರದೇಶದೊಳಗೆ ತಾಯಿಯಿಂದ ಬೇರ್ಪಟ್ಟ 6 ರಿಂದ 8 ತಿಂಗಳ ಒಂದು ಗಂಡು, ಮತ್ತೊಂದು ಹೆಣ್ಣು ಹುಲಿ ಮರಿಗಳು ಆಹಾರದ ಕೊರೆತೆಯಿಂದ ಮೃತಪಟ್ಟಿವೆ. ಮತ್ತೊಂದು ಗಂಡು ಹುಲಿ ಮರಿಯ ಸ್ಥಿತಿಯೂ ಚಿಂತಾಜನಕವಾಗಿದ್ದು, ಮೈಸೂರಿನ ಮೃಗಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬದುಕುಳಿದಿರುವ ಗಂಡು ಹುಲಿ ಮರಿಯನ್ನು ಪಶು ವೈದ್ಯರು ಮೈಸೂರು ಮೃಗಾಲಯದಲ್ಲಿ ಚಿಕಿತ್ಸೆ ನೀಡಿ, ಬದುಕಿಸಲು ಪ್ರಯತ್ನಿಸುತ್ತಿದ್ದಾರೆ. ತಾಯಿ ಬೇರ್ಪಟ್ಟಿರುವ ಬಗ್ಗೆ ಹೆಜ್ಜೆಗಳ ಗುರುತಿನ ಬಗ್ಗೆಯೂ ತನಿಖೆ ನಡೆದಿದೆ. ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಈ ಮೂರು ಹುಲಿಮರಿಗಳು ಬಿದ್ದಿರುವುದು ಕಾಣಿಸಿತು. ಹತ್ತಿರ ಹೋಗಿ ಪರಿಶೀಲಿಸಿದಾಗ ಎರಡು ಹುಲಿ ಮರಿಗಳು ಮೃತಪಟ್ಟಿದ್ದವು. ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.

ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಆರ್. ಗೋಕುಲ್ ಮತ್ತು ಎಸಿಎಫ್ ನಿಂಗರಾಜು, ಹುಲಿ ಯೋಜನೆ ಪ್ರಾಧಿಕಾರ ಸಮಿತಿ ಸದಸ್ಯ ಬಂಡೀಪುರ ರಘುರಾಮು, ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಾಯಿಯಿಂದ ಬೇರ್ಪಟ್ಟಿದ್ದರಿಂದ ಹುಲಿ ಮರಿಗಳಿಗೆ ಹಾಲು ಮತ್ತು ಆಹಾರದ ಕೊರತೆಯಿಂದ ಮೃತಪಟ್ಟಿವೆ ಮತ್ತೊಂದನ್ನು ಬದುಕಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಆರ್. ಗೋಕುಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT