ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೌನ್ಸಿಲರ್ ಹತ್ಯೆ: ಪ್ರಮುಖ ಆರೋಪಿ ಶರಣು

ರೌಡಿ ಕೌನ್ಸಿಲರ್ ನಿಜಾಂ ಪಾಷ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಮದ್ ರಾಮನಗರದ ಹಿರಿಯ ಸಿವಿಲ್...

ರಾಮನಗರ: ರೌಡಿ ಕೌನ್ಸಿಲರ್ ನಿಜಾಂ ಪಾಷ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಮದ್ ರಾಮನಗರದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಶುಕ್ರವಾರ ಶರಣಾಗಿದ್ದಾನೆ.

ಬೆಂಗಳೂರಿನ ನಾಲ್ವರು ವಕೀಲರ ಜತೆ ನ್ಯಾಯಾಲಯಕ್ಕೆ ಬೆಳಗ್ಗೆ 11.15ಕ್ಕೆ ಆಗಮಿಸಿದ ಸಮದ್, ನ್ಯಾಯಾಧೀಶ ಎಸ್.ಎಚ್.ಹೊಸಗೌಡರ್ ಅವರೆದುರು ಶರಣಾದ. ನ್ಯಾಯಾಧೀಶರು ಆರೋಪಿಯನ್ನು ಜ.29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ನಿಜಾಂ ಪಾಷ ಹತ್ಯೆಗೂ ಸಮದ್‌ಗೂ ಸಂಬಂಧವಿಲ್ಲ. ಆದರೆ, ಪೊಲೀಸರು ಈತನನ್ನು ಮೊದಲ ಆರೋಪಿಯಾಗಿಸಿದ್ದು, ಬಂಧಿಸಲು ಹುಡುಕಾಡುತ್ತಿದ್ದಾರೆ. ಅಂತೆಯೇ ಜೀವಭಯದ ಹಿನ್ನೆಲೆಯಲ್ಲಿ ಸಮದ್ ಶರಣಾಗುತ್ತಿದ್ದಾನೆ ಎಂದು ಆತನ ಪರ ವಕೀಲರು ವಕಾಲತ್ತು ಅರ್ಜಿಯಲ್ಲಿ ಹೇಳಿದ್ದಾರೆ.

ಆರೋಪಿಯನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸ್ ತನಿಖಾಧಿಕಾರಿ ಕೋರಿಕೆ ಸಲ್ಲಿಸಲಿಲ್ಲ. ಹೀಗಾಗಿ ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT