ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೌನ್ಸಿಲರ್ ಹತ್ಯೆ: ಪ್ರಮುಖ ಆರೋಪಿ ಶರಣು

ರೌಡಿ ಕೌನ್ಸಿಲರ್ ನಿಜಾಂ ಪಾಷ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಮದ್ ರಾಮನಗರದ ಹಿರಿಯ ಸಿವಿಲ್...

ರಾಮನಗರ: ರೌಡಿ ಕೌನ್ಸಿಲರ್ ನಿಜಾಂ ಪಾಷ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಮದ್ ರಾಮನಗರದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಶುಕ್ರವಾರ ಶರಣಾಗಿದ್ದಾನೆ.

ಬೆಂಗಳೂರಿನ ನಾಲ್ವರು ವಕೀಲರ ಜತೆ ನ್ಯಾಯಾಲಯಕ್ಕೆ ಬೆಳಗ್ಗೆ 11.15ಕ್ಕೆ ಆಗಮಿಸಿದ ಸಮದ್, ನ್ಯಾಯಾಧೀಶ ಎಸ್.ಎಚ್.ಹೊಸಗೌಡರ್ ಅವರೆದುರು ಶರಣಾದ. ನ್ಯಾಯಾಧೀಶರು ಆರೋಪಿಯನ್ನು ಜ.29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ನಿಜಾಂ ಪಾಷ ಹತ್ಯೆಗೂ ಸಮದ್‌ಗೂ ಸಂಬಂಧವಿಲ್ಲ. ಆದರೆ, ಪೊಲೀಸರು ಈತನನ್ನು ಮೊದಲ ಆರೋಪಿಯಾಗಿಸಿದ್ದು, ಬಂಧಿಸಲು ಹುಡುಕಾಡುತ್ತಿದ್ದಾರೆ. ಅಂತೆಯೇ ಜೀವಭಯದ ಹಿನ್ನೆಲೆಯಲ್ಲಿ ಸಮದ್ ಶರಣಾಗುತ್ತಿದ್ದಾನೆ ಎಂದು ಆತನ ಪರ ವಕೀಲರು ವಕಾಲತ್ತು ಅರ್ಜಿಯಲ್ಲಿ ಹೇಳಿದ್ದಾರೆ.

ಆರೋಪಿಯನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸ್ ತನಿಖಾಧಿಕಾರಿ ಕೋರಿಕೆ ಸಲ್ಲಿಸಲಿಲ್ಲ. ಹೀಗಾಗಿ ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT