ಘಟನೆ ನಡೆದ ಸ್ಥಳ 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಮನೆಗಳ್ಳರ ಮೇಲೆ ಗುಂಡಿನ ದಾಳಿ

ಮನೆಯೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪಶ್ಚಿಮಬಂಗಾಳ ಮೂಲದ ಇಬ್ಬರು ಮನೆಗಳ್ಳರ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಂಗಳವಾರ...

ಬೆಂಗಳೂರು: ಮನೆಯೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪಶ್ಚಿಮಬಂಗಾಳ ಮೂಲದ  ಇಬ್ಬರು ಮನೆಗಳ್ಳರ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಗರದ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ವಿದ್ಯಾರಣ್ಯಪುರದ ಸಪ್ತಗಿರಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಮಿಥುನ್(26) ಮತ್ತು ಅಖಿಲ್(36) ಎಂದು ಗುರುತಿಸಲಾಗಿದೆ.

ಸಪ್ತಗಿಕಿ ಲೇಔಟ್‌ನ ನಿವಾಸಿ ಮುರುಳಿ ಮನೋಹರ್ ಎಂಬುವವರು ಕಳೆದ ಮೂರು ದಿನಗಳಿಂದ ಮನೆಯಲ್ಲಿರಲಿಲ್ಲ. ಈ ಸಮಯವನ್ನೇ ಹೊಂಚು ಹಾಕುತ್ತಿದ್ದ ಇಬ್ಬರು ಕಳ್ಳರು, ಇಂದು ಮುಂಜಾನೆ 5.15ರ ಸುಮಾರಿಗೆ ಮನೆಗೆ ನುಗ್ಗಿ ಕಳ್ಳತನಕ್ಕೆ ಮುಂದಾಗಿದ್ದಾರೆ.

ಈ ಮಾಹಿತಿ ತಿಳಿಯುತ್ತಿದ್ದಂತೆ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಕಳ್ಳರನ್ನು ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರು ಮನೆಗಳ್ಳರು ಪೇದೆ ನಾಗಭೂಷಣ್ ಕೈಗೆ ರಾಡ್‌ನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಇನ್ಸ್‌ಪೆಕ್ಟರ್ ಪುನೀತ್ ಅವರು ಮನೆಗಳ್ಳರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಕಳ್ಳರ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಪೇದೆ ಮತ್ತು ಇಬ್ಬರು ಕಳ್ಳರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT