ಜಿಲ್ಲಾ ಸುದ್ದಿ

ರಾಜ್ಯದ ಇಬ್ಬರಿಗೆ ರಾಷ್ಟ್ರಪತಿ ಸೇವಾ ಪದಕ

Mainashree

ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪ್ರಶಸ್ತಿ ಪದಕಕ್ಕೆ 2015ನೇ ಸಾಲಿನಲ್ಲಿ ರಾಜ್ಯ ಕಾರಾಗೃಹ ಇಲಾಖೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದು, ಶ್ಲಾಘನೀಯ ಸೇವಾ ಪದಕ ಲಭಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ ಎಂ.ಎ.ಮರಿಗೌಡ (ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಹಾಗೂ ಹಾಸನದ ಕಾರಾಗೃಹ ಅಧಿಕಾರಿ ವಿ.ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಲಭಿಸಿದೆ.

SCROLL FOR NEXT