ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಒಂಟಿ ಮಹಿಳೆ ಕೊಲೆ

ಬೆಂಗಳೂರು: ರಾಜಗೋಪಾಲ ನಗರದ ಪ್ರೀತಿ ನಗರದಲ್ಲಿ ಒಂಟಿ ಮಹಿಳೆ ಉಮಾ(35) ಅವರನ್ನು ಮಂಗಳವಾರ ಹಾಡಹಗಲೇ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ.

ಉಮಾ ಅವರಿಗೆ ರಮೇಶ್ ಎಂಬುವರ ಜತೆ 15 ವರ್ಷ ಹಿಂದೆ ಮದುವೆಯಾಗಿತ್ತು. ದಂಪತಿ ಇಬ್ಬರು ಮಕ್ಕಳಿದ್ದಾರೆ. ರಮೇಶ್ ಮೆಡಿಕಲ್ ಶಾಪ್ ನಡೆಸುತ್ತಿದ್ದಾರೆ. ಮಕ್ಕಳ ಪೈಕಿ ಒಬ್ಬಾತ ಶಾಲೆಗೆ, ಇನ್ನೊಬ್ಬ ಅಜ್ಜಿ ಮನೆಗೆ ಹೋಗಿದ್ದಾಗ ಮಧ್ಯಹ್ನ 2.30ರ ಸುಮಾರಿಗೆ ಕೃತ್ಯ ಎಸಗಲಾಗಿದೆ. ರಮೇಶ್ ಊಟಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಮಧ್ಯಾಹ್ನ 1.30ರ ಹೊತ್ತಿಗೆ ಮನೆಯಿಂದ ಗಲಾಟೆ ಕೇಳಿಬಂದಿದ್ದು, ದಂಪತಿ ನಡುವೆ ಜಗಳವಾಗಿದೆ.  ಗಂಡನೇ ಕೊಲೆ ಮಾಡಿರಬಹುದು ಎನ್ನುವ ಶಂಕೆ ಇದೆ. ಆದರೆ ದಂಪತಿ ಅನ್ಯೋನ್ಯವಾಗಿದ್ದರೆಂದು ಮನೆ ಮಾಲೀಕ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ರಾಜಗೋಪಾಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT