ಗಣಿಗಾರಿಕೆ 
ಜಿಲ್ಲಾ ಸುದ್ದಿ

ರಾಜ್ಯದ ಮೇಲೆ ಮತ್ತೆ ಇ'ಗಣಿ'ತದ ಧೂಳು

ಎರಡು ವರ್ಷಗಳಿಂದ ಬಳ್ಳಾರಿಯಲ್ಲಿ ಸದ್ದಿಲ್ಲದೆ ಅಡಗಿದ್ದ ಗಣಿ ಗಾರಿಕೆ ಧೂಳು ಮತ್ತೆ ರಾಚುವ ಸಾಧ್ಯತೆ ಗಳು ದಟ್ಟವಾಗಿವೆ...

ನವದೆಹಲಿ: ಎರಡು ವರ್ಷಗಳಿಂದ ಬಳ್ಳಾರಿಯಲ್ಲಿ ಸದ್ದಿಲ್ಲದೆ ಅಡಗಿದ್ದ ಗಣಿಗಾರಿಕೆ ಧೂಳು ಮತ್ತೆ ರಾಚುವ ಸಾಧ್ಯತೆ ಗಳು ದಟ್ಟವಾಗಿವೆ. ಕರ್ನಾಟಕದಲ್ಲಿ ಗಣಿ ಉತ್ಪಾದನೆಗೆ ಇ-ಹರಾಜು ಮೂಲಕ ಪುನರ್ ಅನುಮತಿ ನೀಡಬಹುದು ಎಂದು ಕೇಂದ್ರೀಯ ಉನ್ನತಾಧಿಕಾರ ಸಮಿತಿ (ಸಿಇಸಿ) ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಈ ಹಿಂದೆ ಅನುಮತಿ ಪಡೆಯಲಾಗಿದ್ದರೂ ರದ್ದಾಗಿದ್ದ 51 ಗಣಿ ಪರವಾನಗಿಯನ್ನು ಪುನಃ ನೀಡಬೇಕು ಎಂದು ಸುಪ್ರೀಂಗೆ ಸಲ್ಲಿಸಲಾದ ವರದಿಯಲ್ಲಿ ಸಮಿತಿ ಉಲ್ಲೇಖಿಸಿದೆ. ಈಚೆಗೆ ಕರ್ನಾಟಕ ಸರ್ಕಾರ ಸಹ ಇ-ಹರಾಜಿಗೆ ಒಲವು ವ್ಯಕ್ತಪಡಿಸಿದ್ದು, ಇದಕ್ಕೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪವನ್ನಿಟ್ಟಿತ್ತು. ಈ ಪ್ರಸ್ತಾಪವನ್ನು ಬೆಂಬಲಿಸಿರುವ ಸಮಿತಿ, ಇದೀಗ ಸುಪ್ರೀಂಗೆ ಶಿಫಾರಸು ಮಾಡಿದೆ. ಇದಲ್ಲದೆ, ಈಗ ಇ-ಹರಾಜುಮೂಲಕ ಗಣಿಗಾರಿಕೆಗೆ ಅನುಮತಿ ಪಡೆಯುವ ಹೊಸ ಗುತ್ತಿಗೆದಾರರಿಗೆ ಈ ಹಿಂದೆ ಶಾಸನಬದಟಛಿವಾಗಿ ನೀಡಲಾಗಿದ್ದ ಮಂಜೂರಾತಿ ಮತ್ತು ಒಪ್ಪಿಗೆಯನ್ನು ಯಾವುದೇ ಬದಲಾವಣೆ ಇಲ್ಲದಂತೆ ವರ್ಗಾವಣೆ ಮಾಡಬೇಕು. ತ್ವರಿತ ಅನುಮತಿ ನೀಡಲು ಸುಪ್ರೀಂ ಕೋರ್ಟ್ ಸೂಚನೆ ನೀಡಬೇಕು ಎಂದೂ ಸಮಿತಿ ಮನವಿ ಮಾ ಡಿದೆ ಎಂದು `ಹಿಂದೂಸ್ತಾನ್ ಟೈಮ್ಸ್ ' ವರದಿ ಮಾಡಿದೆ.

ರದ್ದಾಗಿತ್ತು: 2013ರ ಏಪ್ರಿಲ್‍ನಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅನುಮತಿ ನೀಡಲಾಗಿದ್ದ 51 ಗಣಿ ಕಂಪನಿಗಳ ಪರವಾನಗಿ ರದ್ದಾಗಿತ್ತು. ಈ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಅಕ್ರಮವಾಗಿ ಅನುಮತಿ ನೀಡಲಾಗಿರುವುದರ ಜತೆಗೆ ಸಾಕಷ್ಟು ಭ್ರಷ್ಟಾಚಾರ ಮಾಡಲಾಗಿದೆ ಎಂದು ಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ನೇತೃತ್ವದ ವಿಶೇಷ ಅರಣ್ಯ ಪೀಠ, ಸಿಇಸಿ ವರದಿಯನ್ವಯ ಸುಪ್ರೀಂ ಈ ತೀರ್ಮಾನ ಕೈಗೊಂಡಿತ್ತು.

ರಾಜ್ಯಕ್ಕೆ ಅಧಿಕಾರ ಕೊಡಿ: ಇ-ಹರಾಜಿನ ನಿಯಮ ಮತ್ತು ಷರತ್ತುಗಳಲ್ಲಿ ಕೆಲವು ಸೂಕ್ತ ಬದಲಾವಣೆಗಳನ್ನು ತಂದುಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ಸ್ವಾತಂತ್ರ್ಯ ನೀಡಲೇಬೇಕು ಎಂದು ಸಿಇಸಿ ವರದಿಯಲ್ಲಿ ಕೋರಿದೆ. ಇ-ಹರಾಜು ಮಾಡುವ ಸಲುವಾಗಿ ಕ್ರಿಸಿಲ್ ರಿಸ್ಕ್ ಮತ್ತು ಇನ್ಫ್ರಾಸ್ಟ್ರಕ್ಚರ್  ಸಲ್ಯೂಷನ್ ಲಿ. ಗೆ ಸಲಹೆ ನೀಡಲು ಕರ್ನಾಟಕ ಸರ್ಕಾರ ಕೇಳಿತ್ತು. ಈ ಸಂಸ್ಥೆ ನೀಡಿದ ವರದಿ ಸ್ವೀಕರಿಸಿದ ರಾಜ್ಯ ಸರ್ಕಾರ 15 ಗಣಿ ಕಂಪನಿಗಳಿಗೆ ಮೊದಲ ಹಂತದ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರದನ್ವಯ ಸಿಇಸಿ ವರದಿ ಸಿದಟಛಿಪಡಿಸಿದ್ದೆ. ಈಗ ಅನುಮತಿ ಪಡೆಯುವ ಗಣಿ ಗುತ್ತಿಗೆದಾರರು ರಾಯಧನ, ಅರಣ್ಯಾಭಿವೃದ್ಧಿ ತೆರಿಗೆ, ಮೌಲ್ಯ ವರ್ಧಿತ  ಸೇವಾ ತೆರಿಗೆ ಮತ್ತಿತರ ಅನ್ವಯಿತ ತೆರಿಗೆಗಳನ್ನು ಪಾವತಿಸಬೇಕು ಎಂದೂ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT