ಕರ್ನಾಟಕ ಹಾಲು ಮಹಾಮಂಡಳ 
ಜಿಲ್ಲಾ ಸುದ್ದಿ

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾಗಿ ರಾಮಲಿಂಗೇಗೌಡ ನೇಮಕ

ಕರ್ನಾಟಕ ಹಾಲು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐ. ಆರ್. ರಾಮಲಿಂಗೇಗೌಡ...

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐ. ಆರ್. ರಾಮಲಿಂಗೇಗೌಡ ಅವರನ್ನು ಮಂಡಳ ನೇಮಕ ಮಾಡಿದೆ.

ಹೈಕೋರ್ಟ್ ಆದೇಶವನ್ನು ಪಾಲಿಸಲು ರಾಮಲಿಂಗೇಗೌಡರನ್ನು ನೇಮಕ ಮಾಡಲಾಗಿದೆ. ಹೀಗಾಗಿ ಸರ್ಕಾರ ಜಯರಾಂ ಅವರನ್ನು ಎಂಡಿ ಆಗಿ ನೇಮಿಸಿ ಜ.30ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಮಂಡಳಿ ಮನವಿ ಮಾಡಿಕೊಂಡಿದೆ.

ಹೈಕೋರ್ಟ್ ವಿಭಾಗೀಯ ಪೀಠದೆದುರು ಮಹಾ ಮಂಡಳಿ ರಾಮಲಿಂಗೇಗೌಡರ ಅಮಾನತು ಹಿಂಪಡೆಯುವುದಾಗಿ ಹೇಳಿತ್ತು. ಅದರಂತೆ ಅಮಾನತು ಹಿಂಪಡೆದು ನೇಮಕ ಮಾಡಲಾಗಿದೆ. ಜ. 31ರಂದು ಎ.ಎಸ್. ಪ್ರೇಮನಾಥ್ ನಿವೃತ್ತಿ ಹೊಂದಿದ್ದು, ಫೆ.1 ರಿಂದ ರಾಮಲಿಂಗೇಗೌಡ ಅ„ಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ರಾಮಲಿಂಗೇಗೌಡರನ್ನು 2011ರ ಜುಲೈನಲ್ಲಿ ಮಂಡಳ ಸೇವೆಯಿಂದ ಅಮಾನತುಗೊಳಿಸಿತ್ತು. ಇದರ ವಿರುದ್ಧ ಅವರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್‍ನ ಏಕ ಸದಸ್ಯ ಪೀಠ ರಾಮಲಿಂಗೇಗೌಡರ ಅರ್ಜಿ ವಜಾಗೊಳಿಸಿತ್ತು. ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠದಲ್ಲಿ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದಾಗ ಮಹಾ ಮಂಡಳ ನವೆಂಬರ್ 2014ರಲ್ಲಿ ನ್ಯಾಯಾಲಯಕ್ಕೆ ಅಮಾನತು  ಹಿಂಪಡೆಯುವುದಾಗಿ ಹೇಳಿಕೆ ನೀಡಿತ್ತು. ವಿಭಾಗೀಯ ಪೀಠ ರಾಮಲಿಂಗೇಗೌಡರ ಮನವಿ ಪುರಸ್ಕರಿಸಿ, ಏಕ ಸದಸ್ಯ ಪೀಠದ ಆದೇಶ ರದ್ದುಗೊಳಿಸಿತ್ತು. ಅಮಾನತು ಹಿಂಪಡೆಯುವಂತೆ ಮಂಡಳಕ್ಕೆ ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT