ಕರ್ನಾಟಕ ಹಾಲು ಮಹಾಮಂಡಳ 
ಜಿಲ್ಲಾ ಸುದ್ದಿ

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾಗಿ ರಾಮಲಿಂಗೇಗೌಡ ನೇಮಕ

ಕರ್ನಾಟಕ ಹಾಲು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐ. ಆರ್. ರಾಮಲಿಂಗೇಗೌಡ...

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐ. ಆರ್. ರಾಮಲಿಂಗೇಗೌಡ ಅವರನ್ನು ಮಂಡಳ ನೇಮಕ ಮಾಡಿದೆ.

ಹೈಕೋರ್ಟ್ ಆದೇಶವನ್ನು ಪಾಲಿಸಲು ರಾಮಲಿಂಗೇಗೌಡರನ್ನು ನೇಮಕ ಮಾಡಲಾಗಿದೆ. ಹೀಗಾಗಿ ಸರ್ಕಾರ ಜಯರಾಂ ಅವರನ್ನು ಎಂಡಿ ಆಗಿ ನೇಮಿಸಿ ಜ.30ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಮಂಡಳಿ ಮನವಿ ಮಾಡಿಕೊಂಡಿದೆ.

ಹೈಕೋರ್ಟ್ ವಿಭಾಗೀಯ ಪೀಠದೆದುರು ಮಹಾ ಮಂಡಳಿ ರಾಮಲಿಂಗೇಗೌಡರ ಅಮಾನತು ಹಿಂಪಡೆಯುವುದಾಗಿ ಹೇಳಿತ್ತು. ಅದರಂತೆ ಅಮಾನತು ಹಿಂಪಡೆದು ನೇಮಕ ಮಾಡಲಾಗಿದೆ. ಜ. 31ರಂದು ಎ.ಎಸ್. ಪ್ರೇಮನಾಥ್ ನಿವೃತ್ತಿ ಹೊಂದಿದ್ದು, ಫೆ.1 ರಿಂದ ರಾಮಲಿಂಗೇಗೌಡ ಅ„ಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ರಾಮಲಿಂಗೇಗೌಡರನ್ನು 2011ರ ಜುಲೈನಲ್ಲಿ ಮಂಡಳ ಸೇವೆಯಿಂದ ಅಮಾನತುಗೊಳಿಸಿತ್ತು. ಇದರ ವಿರುದ್ಧ ಅವರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್‍ನ ಏಕ ಸದಸ್ಯ ಪೀಠ ರಾಮಲಿಂಗೇಗೌಡರ ಅರ್ಜಿ ವಜಾಗೊಳಿಸಿತ್ತು. ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠದಲ್ಲಿ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದಾಗ ಮಹಾ ಮಂಡಳ ನವೆಂಬರ್ 2014ರಲ್ಲಿ ನ್ಯಾಯಾಲಯಕ್ಕೆ ಅಮಾನತು  ಹಿಂಪಡೆಯುವುದಾಗಿ ಹೇಳಿಕೆ ನೀಡಿತ್ತು. ವಿಭಾಗೀಯ ಪೀಠ ರಾಮಲಿಂಗೇಗೌಡರ ಮನವಿ ಪುರಸ್ಕರಿಸಿ, ಏಕ ಸದಸ್ಯ ಪೀಠದ ಆದೇಶ ರದ್ದುಗೊಳಿಸಿತ್ತು. ಅಮಾನತು ಹಿಂಪಡೆಯುವಂತೆ ಮಂಡಳಕ್ಕೆ ಸೂಚಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT