ನ್ಯಾ. ಭಾಸ್ಕರರಾವ್ 
ಜಿಲ್ಲಾ ಸುದ್ದಿ

ಸೂಕ್ಷ್ಮತೆ ಅರಿತು ರಾಜಿನಾಮೆ ಸಲ್ಲಿಸಿ ಲೋಕಾಗೆ ಮನವಿ

ವೈಯಕ್ತಿಕ ಪ್ರತಿಷ್ಠೆ ಬದಿಗಿಟ್ಟು, ಸಂಸ್ಥೆಯ ಪ್ರತಿಷ್ಠೆಯನ್ನು ಪರಿಗಣಿಸಿ ಲೋಕಾಯುಕ್ತ ಹುದ್ದೆಗೆ ನ್ಯಾ. ಭಾಸ್ಕರರಾವ್ ರಾಜಿನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ. ಅದೇ ರೀತಿ ಪ್ರಕರಣವನ್ನು ಪ್ರತಿಷ್ಠೆಯeಗಿ ಸ್ವೀಕರಿಸದೇ ಸಿಬಿಐಗೆ ವಹಿಸಬೇಕೆಂದು ರಾಜ್ಯ ಸರ್ಕಾರವನ್ನು...

ಬೆಂಗಳೂರು: ವೈಯಕ್ತಿಕ ಪ್ರತಿಷ್ಠೆ ಬದಿಗಿಟ್ಟು, ಸಂಸ್ಥೆಯ ಪ್ರತಿಷ್ಠೆಯನ್ನು ಪರಿಗಣಿಸಿ ಲೋಕಾಯುಕ್ತ ಹುದ್ದೆಗೆ ನ್ಯಾ. ಭಾಸ್ಕರರಾವ್ ರಾಜಿನಾಮೆ  ನೀಡಬೇಕು ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ. ಅದೇ ರೀತಿ ಪ್ರಕರಣವನ್ನು ಪ್ರತಿಷ್ಠೆಯeಗಿ ಸ್ವೀಕರಿಸದೇ ಸಿಬಿಐಗೆ ವಹಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮeತನಾಡಿದ ಬಿಜೆಪಿ ವಕ್ತಾರ ಸುರೇಶ್ ಕುಮಾರ್, ಲೋಕಾಯುಕ್ತರು ಮುಜುಗರ ಅನುಭವಿಸುವ ಬದಲು ರಾಜಿನಾಮೆ ಕೊಡುವುದೇ ಸೂಕ್ತ. ಅಲ್ಲದೇ ಅವರು ರಾಜಿನಾಮೆ ಕೊಡಬೇಕೆಂಬುದು ಇಡೀ ನಾಡಿನ ಎಲ್ಲಾ ಪ್ರಜ್ಞಾವಂತ ನಾಗರಿಕರ ಆಗ್ರಹ ಎಂದರು.

ಮಾದರಿಗೆ ಕಳಂಕ:
ಕರ್ನಾಟಕದ ಲೋಕಾಯುಕ್ತ ಕಾಯ್ದೆ ಇಡೀ ದೇಶಕ್ಕೆ ಒಂದು ಮಾದರಿ ಕಾಯ್ದೆ. ಆದರೆ, ಇಲ್ಲಿ ನಡೆದಿರುವ ವಿದ್ಯಮಾನಗಳು, ಸಂಶಯದ ಮುಳ್ಳು ಕೂಡ ಲೋಕಾಯುಕ್ತರ ಮನೆಯತ್ತ ಮತ್ತು ಲೋಕಾಯುಕ್ತ ಕಚೇರಿ ಕಡೆ ತೋರಿಸುತ್ತಿದೆ. ಲೋಕಾಯುಕ್ತ ಕಚೇರಿಯ ಕೃಷ್ಣರಾವ್ ಅತ್ಯಂತ ಗೂಢವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಲೋಕಾಯುಕ್ತರ ಮಗ ಅಶ್ವಿನ್ ರಾವ್ ಅವರ ಮೇಲೆ ಆರೋಪ ಬಂದಿದೆ. ವ್ಯಕ್ತಿಗಿಂತ ಸಂಸ್ಥೆ ದೊಡ್ಡದು ಎಂಬುದನ್ನು ಮನಸ್ಸಿನಲ್ಲಿಟ್ಟು ನ್ಯಾ. ಭಾಸ್ಕರ್‍ರಾವ್ ರಾಜಿನಾಮೆ ಕೊಡಬೇಕೆಂದು ಕರ್ನಾಟಕದ ವಕೀಲರ ಪರಿಷತ್ತು ಕೂಡ ನಿರ್ಣಯ ಕೈಗೊಂಡು, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ, ಲೋಕಾಯುಕ್ತರ ಪ್ರತಿ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತೇವೆ ಎಂದು ಹೇಳಿದೆ. ಇದು ಅತ್ಯಂತ ಮುಜುಗರ ತರುವ ಸಂದರ್ಭ ಎಂದು ಹೇಳಿದರು.

ಆಡಳಿತದಲ್ಲಿ ಭ್ರಷ್ಟಾಚಾರ ನಿಯಂತ್ರಿಸಬೇಕಾದ ಸಂಸ್ಥೆಯೇ ಭ್ರಷ್ಟಾಚಾರದ ಸುಳಿವಿನಲ್ಲಿ ಸಿಲುಕಿದೆ. ಈ ಸೂಕ್ಷ್ಮವನ್ನು ಲೋಕಾ ಯುಕ್ತ ನ್ಯಾ. ಭಾಸ್ಕರ್ ರಾವ್ ಅರಿಯಬೇಕು, ತಮ್ಮ ಸಂಸ್ಥೆಯ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಕೂಡಲೇ ರಾಜಿನಾಮೆ ಕೊಡಬೇಕು ಎಂದು ಸುರೇಶ್‍ಕುಮಾರ್ ಆಗ್ರಹಿಸಿದರು.

ಸಿಬಿಐ ತನಿಖೆಯೇ ಸೂಕ್ತ:
ಎಡಿಜಿಪಿ ಕಮಲ್ ಪಂತ್ ನೇತೃತ್ವದಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ. ಕಮಲ್‍ಪಂತ್ ಅವರ ದಕ್ಷತೆ ಬಗ್ಗೆ ಸಂಶಯವಿಲ್ಲ. ಆದರೆ, ಲೋಕಾಯುಕ್ತ ಪ್ರಕರಣದಲ್ಲಿ ಅನೇಕ ಮಹನೀಯರ ಹೆಸರು ತಗುಲಿಕೊಂಡಿದೆ. ನಮ್ಮ ರಾಜ್ಯದ ತನಿಖಾ ತಂಡದ ಮುಂದೆ ಬರುವ ಪ್ರಭಾವಗಳು, ಒತ್ತಡಗಳನ್ನು ಯಾರಾದರೂ ಸುಲಭವಾಗಿ ಊಹೆ ಮಾಡಬಹುದು. ಹೀಗಾಗಿ
ಸಿಬಿಐ ತನಿಖೆ ಸೂಕ್ತ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT