ಸಚಿವ ಎಚ್.ಆಂಜನೇಯ 
ಜಿಲ್ಲಾ ಸುದ್ದಿ

ಆಂಜನೇಯ ಮೇಲೆ ಮುಖ ಊದಿಸಿಕೊಂಡ ಶಾಸಕರು!

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತ ಸಚಿವ ಎಚ್. ಆಂಜನೇಯ ಸೇರಿದಂತೆ ಇತರೆ ಸಚಿವರ ಕಾರ್ಯವೈಖರಿ...

ಸುವರ್ಣ ವಿಧಾನಸೌಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತ ಸಚಿವ ಎಚ್. ಆಂಜನೇಯ ಸೇರಿದಂತೆ ಇತರೆ ಸಚಿವರ ಕಾರ್ಯವೈಖರಿ ಬಗ್ಗೆ ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಯಿತು.

ಪರಿಶಿಷ್ಟ ಜಾತಿ ಮತ್ತು ಗಿರಿಜನ ವಿಶೇಷ ಉಪಯೋಜನೆ ಅನುಷ್ಠಾನವನ್ನು ಸಚಿವ ಎಚ್. ಆಂಜನೇಯ ಕೇವಲ ಕಡತ ಮತ್ತು ಮಾತಿಗೆ ಸೀಮಿತಗೊಳಿಸುತ್ತಿದ್ದಾರೆ. ವಿಶೇಷ ಉಪ ಯೋಜನೆಗೆ ಮೀಸಲಿಟ್ಟ 15 ಸಾವಿರ ಕೋಟಿ ಹಣಕ್ಕೆ ತಾವೊಬ್ಬರೇ ಮಾಲೀಕರು ಎಂಬಂತೆ ಆಂಜನೇಯ ವರ್ತಿಸುತ್ತಿದ್ದಾರೆ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಾದ ಪ್ರಸಾದ್ ಅಬ್ಬಯ್ಯ, ನರೇಂದ್ರ ಸ್ವಾಮಿ, ಶಿವರಾಂ ಹೆಬ್ಬಾರ್, ಸಿದ್ದು ನ್ಯಾಮೇಗೌಡ ಸೇರಿದಂತೆ ಮೀಸಲು ಮತ್ತು ಸಾಮಾನ್ಯ ಕ್ಷೇತ್ರದ 20ಕ್ಕೂ ಹೆಚ್ಚು ಶಾಸಕರು ಭಾರಿ ಆಕ್ಷೇಪ ವ್ಯಕ್ತಪಡಿಸಿದರು. ತಮ್ಮ ಆಪ್ತ ಸಚಿವರ ಬಗ್ಗೆ ಈ ರೀತಿ ಆಕ್ಷೇಪ ವ್ಯಕ್ತವಾಗಿದ್ದರಿಂದ ತುಸು ವಿಚಲಿತರಾದ ಸಿಎಂ ಸಿದ್ಧರಾಮಯ್ಯ, ನಾನೇ ಇನ್ನು ಮುಂದೆ ಈ ಬಗ್ಗೆ ವೈಯಕ್ತಿಕ ಜವಾಬ್ದಾರಿ ತೆಗೆದುಕೊಳ್ಳುವುದರ ಜತೆಗೆ ಆಂಜನೇಯ ಅವರ ಜತೆ ಮಾತನಾಡುತ್ತೇನೆ ಎಂದು ಶಾಸಕರಿಗೆ ಭರವಸೆ ನೀಡಿದ್ದಾರೆ.

ಲೋಕಾಯುಕ್ತ ಸ್ವಾಯತ್ತ ಸಂಸ್ಥೆಯಾಗಿದ್ದು, ಸರ್ಕಾರ ಇದರಲ್ಲಿ ನೇರವಾಗಿ ಭಾಗವಹಿಸುವಂತಿಲ್ಲ. ಲೋಕಾಯುಕ್ತರು ಸೂಚನೆ ನೀಡಿದರೆ ಸರ್ಕಾರ ಸಿಬಿಐ ತನಿಖೆಗೆ ವಹಿಸುತ್ತದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್ ಐಟಿ ರಚನೆ ಮಾಡುವಂತೆ ಲೋಕಾಯುಕ್ತರು ಹೇಳಿದ್ದರು. ಅದರಂತೆ ಎಡಿಜಿಪಿ ಕಮಲ್ ಪಂಥ್ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!