ಮಾಜಿ ಶಾಸಕ ಎ.ಟಿ.ರಾಮಸ್ವಾಮಿ 
ಜಿಲ್ಲಾ ಸುದ್ದಿ

ನಿವೇಶನದ ಉರುಳು ಭಾಸ್ಕರ್ ರಾವ್ ರಾಜಿನಾಮೆ ನೀಡಬೇಕು: ಎ.ಟಿ.ರಾಮಸ್ವಾಮಿ

ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ನ್ಯಾಯಾಂಗ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿವೇಶನ ಸಂಖ್ಯೆ 1553ರಲ್ಲಿ 60-ಗಿ90 ಅಳತೆಯ ನಿವೇಶನ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ನ್ಯಾ.ಶಿವರಾಜ್ ಪಾಟೀಲ್...

ಹಾಸನ: ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ನ್ಯಾಯಾಂಗ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿವೇಶನ ಸಂಖ್ಯೆ 1553ರಲ್ಲಿ 60-ಗಿ90 ಅಳತೆಯ ನಿವೇಶನ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ನ್ಯಾ.ಶಿವರಾಜ್ ಪಾಟೀಲ್ ರಂತೆ ನ್ಯಾ.ಭಾಸ್ಕರ್ ರಾವ್ ಸಹ ರಾಜಿನಾಮೆ ನೀಡಬೇಕು ಎಂದು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಆಗ್ರಹಿಸಿದ್ದಾರೆ.

ನ್ಯಾ. ಭಾಸ್ಕರ್ ರಾವ್ ಅವರು ನಿವೇಶನ ಹೊಂದಿರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರಿಗೆ ಮೊದಲೇ ಮಾಹಿತಿ ಇತ್ತು. ಹೀಗಿದ್ದರೂ ನೇಮಕ ಮಾಡಲಾಗಿದೆ. ಸರ್ಕಾರ ಮತ್ತು ರಾಜ್ಯಪಾಲರಿಗೆ ಭ್ರಷ್ಟ ಸಂಸ್ಥೆ ಬೇಕಾಗಿದೆ. ಕಿಂಚಿತ್ತಾದರೂ ಸ್ವಾಭಿಮಾನವಿದ್ದರೆ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಅವರು ತಾವಾಗಿಯೇ ರಾಜಿನಾಮೆ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಖಂಡಿಸಿದರು.

ರಾಮಸ್ವಾಮಿ ಅವರು ಸರ್ಕಾರಿ ಭೂಮಿ ಒತ್ತುವರಿ ಜಂಟಿ ಸದನ ಸಮಿತಿ ಅಧ್ಯಕ್ಷರಾಗಿ ಸಂಚಲನ ಮೂಡಿಸಿದ್ದರು. ಲೋಕಾಯುಕ್ತ ನ್ಯಾಯಮೂರ್ತಿ ಅವರ ಮನೆಯಲ್ಲಿಯೇ ಭ್ರಷ್ಟಾಚಾರ ನಡೆದಿರುವುದರಿಂದ ಇಡೀ ಪ್ರಕರಣದ ಸಂಪೂರ್ಣ ಜವಾಬ್ದಾರಿ ಅವರೇ ಹೊರಬೇಕು. ಲೋಕಾಯುಕ್ತ ಸಂಸ್ಥೆಗಳು ಮಾಮೂಲಿ ವಸೂಲಿ ಸಂಸ್ಥೆಗಳಾಗಿವೆ. ಈ ಸಂಸ್ಥೆಗೆ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿಸುತ್ತಿರುವುದು ಪುನರ್ವಸತಿ ಕೇಂದ್ರವಾಗಿ ಪರಿಣಮಿಸಿದೆ. ನಿವೃತ್ತಿ ಹೊಂದಿದವರಿಗೆ ಸೇವಾ ನಿಯಮಗಳು ಅನ್ವಯವಾಗುವುದಿಲ್ಲ. ಇವರನ್ನು ನೇಮಕ ಮಾಡುವುದರಿಂದ ಉತ್ತರದಾಯತ್ವ ಇರುವುದಿಲ್ಲ. ಆದ್ದರಿಂದ ಇಂತಹ ಸಂಸ್ಥೆಗಳಿಗೆ ಹಾಲಿ ನ್ಯಾಯಮೂರ್ತಿಗಳ ಬದಲು ಹಾಲಿ  ನ್ಯಾಯಮೂರ್ತಿಗಳನ್ನು ನೇಮಕ ಮಾಡಬೇಕು. ಈ ಬಗ್ಗೆ ಶಾಸನಗಳನ್ನು ತಂದು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ