ಜನ ಸಂಗ್ರಾಮ ಪರಿಷತ್‍ನ ಮುಖ್ಯಸ್ಥ ಎಸ್.ಆರ್.ಹಿರೇಮಠ 
ಜಿಲ್ಲಾ ಸುದ್ದಿ

ನ್ಯಾ. ಭಾಸ್ಕರರಾವ್ ರಾಜಿನಾಮೆ ಯಾವಾಗ?: ಎಸ್.ಆರ್. ಹಿರೇಮಠ

ಲೋಕಾಯುಕ್ತ ನ್ಯಾ. ಭಾಸ್ಕರರಾವ್ ಅವರ ಮಗ ಅಶ್ವಿನ್ ರಾವ್ ಅವರನ್ನು ಕೂಡಲೇ ಬಂಧಿಸಿ, ತನಿಖೆಯನ್ನು ಸಿಬಿಐಗೆ ವಹಿಸಬೇಕು. ನೈತಿಕ ಹೊಣೆ ಹೊತ್ತು ನ್ಯಾ. ಭಾಸ್ಕರರಾವ್ ರಾಜಿನಾಮೆ ನೀಡಬೇಕೆಂದು ಜನ...

ಹುಬ್ಬಳ್ಳಿ: ಲೋಕಾಯುಕ್ತ ನ್ಯಾ. ಭಾಸ್ಕರರಾವ್ ಅವರ ಮಗ ಅಶ್ವಿನ್ ರಾವ್ ಅವರನ್ನು ಕೂಡಲೇ ಬಂಧಿಸಿ, ತನಿಖೆಯನ್ನು ಸಿಬಿಐಗೆ ವಹಿಸಬೇಕು. ನೈತಿಕ ಹೊಣೆ ಹೊತ್ತು ನ್ಯಾ. ಭಾಸ್ಕರರಾವ್ ರಾಜಿನಾಮೆ ನೀಡಬೇಕೆಂದು ಜನ ಸಂಗ್ರಾಮ ಪರಿಷತ್‍ನ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಸಂಸ್ಥೆಗೆ ತನ್ನದೇ ಆದ ಘನತೆ, ಗೌರವವಿದೆ. ಇಲ್ಲಿ ಭ್ರಷ್ಟರ ಬೇಟೆಯಾಗಬೇಕೆ ಹೊರತು, ಇಲ್ಲಿಯೇ ಭ್ರಷ್ಟಾಚಾರ ನಡೆಯಬಾರದು. ಸರ್ಕಾರಿ ಅಧಿಕಾರಿಯನ್ನು ಹೆದರಿಸಿ ಹಣ ಪಡೆದುಕೊಳ್ಳಲು ಪ್ರಯತ್ನಿಸಿದ ಪ್ರಕರಣದಲ್ಲಿ ಲೋಕಾಯುಕ್ತರ ಮಗ ಆರೋಪಿಯಾಗಿದ್ದಾರೆ. ಮೇ 11ರಂದು ಸೋನಿಯಾ ನಾರಂಗ್, ಪ್ರಕರಣದ ಕುರಿತು ಲೋಕಾಯುಕ್ತರಿಗೆ ತಿಳಿಸಿದಾಗಲೇ ಲೋಕಾಯುಕ್ತರು ಪುತ್ರ ಅಶ್ವಿನ್‍ರಾವ್ ಅವರನ್ನು ಬಂಧಿಸಬೇಕಿತ್ತು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ದೂರು ದಾಖಲಿಸಿಕೊಳ್ಳಬಾರದೆಂದು ಕಾನೂನು ಬಾಹಿರವಾಗಿ ಆದೇಶಿಸಿದ್ದಾರೆ.

ಈ ವಿಷಯ ಗಮನಿಸಿದರೆ, ಲೋಕಾಯುಕ್ತರು ತಮ್ಮ ಪುತ್ರನ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಸರ್ಕಾರವು ಲೋಕಾಯುಕ್ತ ಭಾಸ್ಕರರಾವ್ ಅವರಿಗೆ ದೀರ್ಘ ರಜೆ ನೀಡಿ, ಅವರ ಪುತ್ರ ಅಶ್ವಿನ್ ಹಾಗೂ ಅವರೊಂದಿಗೆ ಶಾಮೀಲಾಗಿರುವ ವ್ಯಕ್ತಿಗಳನ್ನು ಬಂಧಿಸಿ, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರವೂ ಲೋಕಾ ಯುಕ್ತರನ್ನು ಈ ಪ್ರಕರಣದಿಂದ ಪಾರು ಮಾಡಲು ಎಸ್‍ಐಟಿ ರಚನೆ ಮÁಡಿದೆ. ಆದರೆ, ವಿಶೇಷ ತನಿಖಾ ದಳ ಸತ್ಯಶೋಧನಾ ವರದಿಯನ್ನು ಎಫ್ಐಆರ್ ದಾಖಲಿಸದೆ ನೀಡಿದೆ. ಆದ್ದರಿಂದ ಕೃಷ್ಣಮೂರ್ತಿ, ಡಿವೈಎಸ್‍ಪಿ ಪ್ರಸನ್ನ, ವಿ. ರಾಜು ನೀಡಿದ ದೂರಿನ ಮೇರೆಗೆ ಅಶ್ವಿನ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT