ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಆಯ್ದ ಸಾರಿಗೆ ದರ ಇಳಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರತಿಷ್ಠಿತ ಸಾರಿಗೆ ವಾಹನಗಳ ಪ್ರಯಾಣ ದರವನ್ನು ಶೇ.10ರಷ್ಟು ಕಡಿತಗೊಳಿಸಿದೆ. ಆದರೆ, ಶನಿವಾರ ಹಾಗೂ...

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರತಿಷ್ಠಿತ ಸಾರಿಗೆ ವಾಹನಗಳ ಪ್ರಯಾಣ ದರವನ್ನು ಶೇ.10ರಷ್ಟು ಕಡಿತಗೊಳಿಸಿದೆ. ಆದರೆ, ಶನಿವಾರ ಹಾಗೂ ಭಾನುವಾರ ಸಂಚರಿಸುವ ಪ್ರಯಾಣಿಕರಿಗೆ ಈ ದರ ಅನ್ವಯವಾಗುವುದಿಲ್ಲ. ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರಗಳಂದು ಪ್ರಯಾಣಿಸುವ ಪ್ರಯಾಣಿಕರುಗಳಿಗೆ ಮಾತ್ರ ಈ ರಿಯಾಯಿತಿ ಸಿಗಲಿದೆ.

ನಿಗಮದ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ವೈಭವ, ಐರಾವತ, ಐರಾವತ ಮಲ್ಟಿ ಆ್ಯಕ್ಸೆಲ್, ಎಸಿ ಸ್ಲೀಪರ್, ನಾನ್ ಎಸಿ ಸೀಪರ್, ಬ್ಲಿಸ್, ಸುಪೀರಿಯಾ ವಾಹನಗಳಿಗೆ ಈ ದರ ಅನ್ವಯವಾಗಲಿದೆ. ಜುಲೈ 1ರಿಂದ ಈ ಕಡಿತದ ದರ ಜಾರಿಯಾಗಿದ್ದು, ಸೆಪ್ಟೆಂಬರ್ ಕೊನೆವರೆಗೆ ರಿಯಾಯಿತಿ ಸಿಗಲಿದೆ. ಈ ತಿಂಗಳುಗಳಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ.

ಸಾಕಷ್ಟು ಬಸ್‍ಗಳು ಖಾಲಿ ಸಂಚರಿಸುತ್ತವೆ. ಹಾಗಾಗಿ ಪ್ರಯಾಣಿಕರನ್ನು ಸೆಳೆಯುವ ಹಿನ್ನೆಲೆಯಲ್ಲಿ ಹಾಗೂ ಇಲಾಖೆ ಆದಾಯ ಹೆಚ್ಚಿಸುವ ಉದ್ದೇಶದಿಂದ ಈ ರಿಯಾಯಿತಿ ನೀಡಲಾಗಿದೆ. ರಿಯಾಯಿತಿ ಬಗ್ಗೆ ಇಲಾಖೆ ವೆಬ್‍ಸೈಟ್‍ನಲ್ಲಿಯೂ ಮಾಹಿತಿ ಡಲಾಗಿದೆ ಎಂದು ಕರಾರಸಾ ನಿಗಮದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!