ಬಡತನ ಮತ್ತು ಹಸಿವಿನ ಪ್ರಶ್ನೆಗಳು ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಡಾ.ಕೆ ಮರುಳಸಿದ್ದಪ್ಪ, ಪ್ರೊ.ಜಿ.ಕೆ ಗೋವಿಂದರಾವ್ 
ಜಿಲ್ಲಾ ಸುದ್ದಿ

ಅನ್ನಭಾಗ್ಯ ಸರ್ಕಾರದ ಭಿಕ್ಷೆಯಲ್ಲ, ಬಡವರ ಹಕ್ಕು: ಮರುಳ ಸಿದ್ದಪ್ಪ

ಜಯಲಲಿತಾ ಸಾವಿರಾರು ಕೋಟಿ ಹಗರಣ ನಡೆಸಿದ್ದರೂ ಅವರ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದ್ದು ತಪ್ಪನ್ನು ಕ್ಷಮಿಸಬೇಕು.ಅನ್ನ ಭಾಗ್ಯ ಟೀಕಿಸುವ ಭೈರಪ್ಪನವರು ಕಸಗುಡಿಸಲು ಕಲಿಯಲಿ

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ನಿಲುವನ್ನು ಖಂಡಿಸದ ಕೆಲವು ಸಾಹಿತಿಗಳು ರಾಜ್ಯ ಸರ್ಕಾರ ಬಡವರಿಗಾಗಿ ವೆಚ್ಚ ಮಾಡುತ್ತಿರುವ ಅನ್ನಭಾಗ್ಯ ಯೋಜನೆಯನ್ನು ಟೀಕಿಸುತ್ತಾರೆ ಎಂದು ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಕಿಡಿಕಾರಿದ್ದಾರೆ.

ಮಾನಸಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಬಡತನ ಮತ್ತು ಹಸಿವಿನ ಪ್ರಶ್ನೆಗಳು ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವರು ಕಾರ್ಪೊರೇಟ್ ಗಳಿಗೆ ಶೇ.5  ರಿಂದ 10 ವರೆಗೆ ತೆರಿಗೆ ವಿನಾಯಿತಿ ನೀಡಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ರೂ.1 .75 ಲಕ್ಷ ಕೋಟಿ ಹೊರೆಯಾಗಿದೆ. ಅದೇ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯಕ್ಕಾಗಿ ನೀಡುತ್ತಿರುವ ಹಣ ಕೇವಲ ರೂ.5 ರಿಂದ 6 ಸಾವಿರ ಕೋಟಿ. ಕೇಂದ್ರದ ಕಾರ್ಪೊರೇಟ್ ಪರ ನಿಲುವು ಟೀಕಿಸದ ಮಧ್ಯಮವರ್ಗದ ಬುದ್ದಿಜೀವಿಗಳು ಅನ್ನಭಾಗ್ಯ ಯೋಜನೆಯನ್ನು ಟೀಕಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೀನು ನೀಡುವ ಬದಲು ಮೀನು ಹಿಡಿಯುವುದನ್ನು ಕಳಿಸಿ ಎಂದು ಸಾಣೆಹಳ್ಳಿ ಸ್ವಾಮಿಜಿ ಹೇಳುತ್ತಾರೆ. ಅವರ ಮಾತನ್ನು ಒಪ್ಪುವುದಾದರೆ ಮೊದಲು ಕೊಳದಲ್ಲಿ ಮೀನುಗಳಿರಬೇಕಲ್ಲವೇ? ಈಗಿನ ಅನೇಕ ಮಠಗಳು ದಾಸೋಹ ಏರ್ಪಡಿಸುತ್ತವೆ. ದಾಸೋಹ ಕಲ್ಪನೆ ಬಡವರಿಗಾಗಿ ಬಂದದ್ದು. ಇದರ ಮುಂದುವರೆದ ಭಾಗವೇ ಅನ್ನಭಾಗ್ಯ. ಇದು ಬಡವರಿಗೆ ನೀಡುತ್ತಿರುವ ಭಿಕ್ಷೆಯಲ್ಲ ಹಕ್ಕು. ಅನ್ನಭಾಗ್ಯದಿಂದ ಜನರು ಸೋಮಾರಿಗಳಾಗುತ್ತಾರೆ ಎನ್ನುವ ಭೈರಪ್ಪ ಮೊದಲು ತಮ್ಮ ಮನೆಯ ಮುಂದೆ ಕಸಗುಡಿಸುವುದನ್ನು ಕಲಿಯಲಿ ಎಂದರು.

ಸಾಹಿತಿ ಪ್ರೊ.ಜಿ.ಕೆ ಗೋವಿಂದರಾವ್ ಮಾತನಾಡಿ ತಮ್ಮದು ಬಡವರ ಪಕ್ಷ ಎಂದು ಹೇಳಿಕೊಳ್ಳುವವರು ಬಡವರಿಗೆ ಯೋಜನೆಗಳನ್ನು ತಂದರೆ ಟೀಕಿಸುತ್ತಾರೆ. ಯಾಕೆಂದರೆ ಬಡವರು ಬಡವರಾಗಿಯೇ ಉಳಿಯಬೇಕು ಎಂಬುದು ಅವರ ಉದ್ದೇಶ. ಹಾಗಾಗಿ ಜನರು ಬುದ್ಧಿ ಕಲಿಯಬೇಕು ಎಂದರು.

"ಜಯಲಲಿತಾ ಅವರು ಸಾವಿರಾರು ಕೋಟಿ ಹಗರಣ ಮಾಡಿ ಸಿಕ್ಕಿ ಹಾಕಿಕೊಂಡಿರಬಹುದು. ಆದರೆ ಅವರು ತಂದ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ. ಉಚಿತ ಅಕ್ಕಿ, ಅಮ್ಮಾ ಕ್ಯಾಂಟೀನ್, ಅಮ್ಮಾ ವಾಟರ್ ನೀಡುತ್ತಿದ್ದಾರೆ. ಇಂತಹ ಯೋಜನೆ ನೋಡಿದಾಗ ಅವರ ತಪ್ಪನ್ನು ಕ್ಷಮಿಸಬೇಕು".

-ಡಾ.ಕೆ ಮರುಳಸಿದ್ದಪ್ಪ

  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT