ಮ್ಯಾನ್ ಹೋಲ್(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮ್ಯಾನ್ ಹೋಲ್ ನಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು

ಮ್ಯಾನ್ ಹೋಲ್ ನಲ್ಲಿ ಬಿದ್ದಿದ್ದ ಇಟ್ಟಿಗೆ ಹಾಗೂ ಇತರೆ ಅಳಿದುಳಿದ ವಸ್ತುಗಳನ್ನು ಮೇಲೆತ್ತಲು ಒಳಗೆ ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಬೆಂಗಳೂರು: ನೂತನವಾಗಿ ನಿರ್ಮಾಣಗೊಂಡಿದ್ದ ಒಳಚರಂಡಿ ಮ್ಯಾನ್ ಹೋಲ್ ನಲ್ಲಿ ಬಿದ್ದಿದ್ದ ಇಟ್ಟಿಗೆ ಹಾಗೂ ಇತರೆ ಅಳಿದುಳಿದ ವಸ್ತುಗಳನ್ನು ಮೇಲೆತ್ತಲು ಒಳಗೆ ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಯಲಹಂಕ ಉಪನಗರದ ಅಟ್ಟೂರು ಬಡಾವಣೆಯಲ್ಲಿ ನಡೆದಿದೆ.

ಕೋಲ್ಕತ್ತಾ ಮೂಲದ ಶಮೀಮ್ ಅಕ್ತರ್ (21 ) ಹಾಗೂ ಕಲಬುರಗಿ ಮೂಲದ ಶರಣಗೌಡ ಪಾಟೀಲ್(23 ) ಮೃತರು. ಇಲ್ಲಿನ ಕೆಂಪನಹಳ್ಳಿ ಮುಖ್ಯರಸ್ತೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಐ.ವಿ.ಆರ್. ಸಿ.ಎಲ್ ಕಂಪನಿಗೆ ನೀಡಿತ್ತು. ಇದೇ ಕಾಮಗಾರಿಯನ್ನು ಐ.ವಿ.ಆರ್.ಸಿ.ಎಲ್  ಕಂಪನಿ ರಾಕೇಶ್ ಎಂಬುವವರಿಗೆ ಉಪಗುತ್ತಿಗೆ ನೀಡಿತ್ತು. ಸೆಪ್ಟೆಂಬರ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕಿದ್ದು ಬಾಕಿ ಕೆಲಸ ನಡೆಯುತ್ತಿತ್ತು.

ಕೆಲಸ ಪೂರ್ಣಗೊಂಡಿದ್ದ ಕೆಲ ಮ್ಯಾನ್ ಹೋಲ್ ಗಳಲ್ಲಿ ಕಾಮಗಾರಿ ನಡೆಸುತ್ತಿದ್ದ ವೇಳೆ ಇಟ್ಟಿಗೆ ಸೇರಿದಂತೆ ಇತರೆ ಕಾಮಗಾರಿ ವಸ್ತುಗಳು ಬಿದ್ದಿದ್ದವು. ಅದನ್ನು ತೆಗೆಯುವಂತೆ ಗುತ್ತಿಗೆದಾರರು ಕಾರ್ಮಿಕರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸಲು ಅಕ್ತರ್ ಹಾಗೂ ಶರಣಗೌಡ ಆಗಮಿಸಿದ್ದರು. ಮೊದಲು ಮ್ಯಾನ್ ಹೋಲ್ ಗೆ ಇಳಿದ ಅಕ್ತರ್ ನಿರ್ವಾತ ಉಂಟಾಗಿ ಒಳಗೆ ಪ್ರಜ್ಞಾಹೀನನಾಗಿದ್ದ. ಎಷ್ಟೊತ್ತಾದರೂ ಆಟ ಹೊರಗೆ ಬಾರದ ಕಾರಣ ಗಾಬರಿಗೊಂಡ ಶರಣಗೌಡ ಅಕ್ತರ್ ನನ್ನು ಮೇಲೆಕ್ಕೆತ್ತಲು ಕೆಳಗೆ ಇಳಿದಿದ್ದಾನೆ. ಆದರೆ ಆತನೂ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ಸಾರ್ವಜನಿಕರಿಂದ ಮಾಹಿತಿ ಪಡೆದ ರಕ್ಷಣಾ ಸಿಬ್ಬಂದಿ  ಇಬ್ಬರ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ಯಲಹಂಕ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT