ವೆಂಕಟೇಶಮೂರ್ತಿ 
ಜಿಲ್ಲಾ ಸುದ್ದಿ

ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಎಫ್‌ಐಆರ್ ದಾಖಲು

ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್...

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆ(ಬಿಎಂಟಿಎಫ್) ಮಂಗಳವಾರ ಎಫ್‌ಐಆರ್ ದಾಖಲಿಸಿದೆ.

ಪದ್ಮನಾಭನಗರದಲ್ಲಿ ಅಕ್ರಮವಾಗಿ ನಿವೇಶನ ಕಬಳಿಸಿದ ಆರೋಪದ ಮೇಲೆ ವೆಂಕಟೇಶಮೂರ್ತಿ ಹಾಗೂ ಅವರ ಪತ್ನಿ ಕೆ.ಪ್ರಭಾ ಮತ್ತು ಇದಕ್ಕೆ ಸಹಕರಿಸಿದ ಕೆಲವು ಬಿಡಿಎ ಅಧಿಕಾರಿಗಳ ವಿರುದ್ಧ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದೆ.

ಪದ್ಮನಾಭನಗರದ 7ನೇ ಕ್ರಾಸ್‌ನಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಬಿಡಿಎ ಮೀಸಲಿಟ್ಟಿದ್ದ ನಿವೇಶನವನ್ನು ಮಾಜಿ ಮೇಯರ್ ವೆಂಕಟೇಶಮೂರ್ತಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮುನಿಕೃಷ್ಣ ಎಂಬುವವರು ದೂರು ನೀಡಿದ್ದರು. ಈ ದೂರಿನ ಅನ್ವಯ ಈಗ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT