ಜಿಲ್ಲಾ ಸುದ್ದಿ

ಮೂರು ತಿಂಗಳು ಮುಂಚಿತವಾಗಿ ಗುತ್ತಿಗೆದಾರರಿಗೆ ಹಣ

ಮೂರು ತಿಂಗಳು ಮುಂಚಿತವಾಗಿ ಗುತ್ತಿಗೆದಾರರ ಹಣ ಬಿಡುಗಡೆ ಮಾಡಿ ಸಮಯಕ್ಕೆ ಸರಿಯಾಗಿ ಪೌರಕಾರ್ಮಿಕರ ವೇತನ ಪಾವತಿಸಲಾಗುವುದು-ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ ವಿಜಯಭಾಸ್ಕರ್

ಬೆಂಗಳೂರು: ಮೂರು ತಿಂಗಳು ಮುಂಚಿತವಾಗಿ ಗುತ್ತಿಗೆದಾರರ ಹಣ ಬಿಡುಗಡೆ ಮಾಡಿ ಸಮಯಕ್ಕೆ ಸರಿಯಾಗಿ ಪೌರಕಾರ್ಮಿಕರ ವೇತನ ಪಾವತಿಸಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ ವಿಜಯಭಾಸ್ಕರ್ ತಿಳಿಸಿದ್ದಾರೆ.

ಘನತ್ಯಾಜ್ಯ ವಿಲೇವಾರಿ ವಿಭಾಗದ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿ ನಂತರ ಮಾತನಾಡಿ, ಗುತ್ತಿಗೆದಾರರ ಹಣವನ್ನೇ 3 ತಿಂಗಳ ಮುಂಚಿತವಾಗಿ ಪಾವತಿಸಲಾಗುತ್ತದೆ. ವಲಯಾಧಿಕಾರಿಗಳು ಪೌರಕಾರ್ಮಿಕರಿಗೆ ಪ್ರತಿ ತಿಂಗಳು ತಡವಾಗಂದತೆ ವೇತನ ನೀಡಲು ಇದರಿಂದ ಸಾಧ್ಯವಾಗುತ್ತದೆ. ಚೆಕ್, ನಗದು ಪಾವತಿ ನಿಷೇಧಿಸಲಾಗಿದ್ದು, ವೇತನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.    ಬೊಮ್ಮನಹಳ್ಳಿಯಲ್ಲಿ ಸಹಾಯಕ ಹಣಕಾಸು ಅಧಿಕಾರಿ ಪ್ರಸನ್ನ ಹಣ ಪಾವತಿಸಲು ಲಂಚ ಬೆಡಿಕೆಯಿಟ್ಟಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಟೆರ್ರಾಫಾರ್ಮ ಹಾಗೂ ಎಂ.ಎಸ್.ಜಿ ಪಿ ಘಟಕಗಳಲ್ಲಿ ಕಸ ಹೊತ್ತೊಯ್ಯುವ ಲಾರಿ ಚಾಲಕರಿಗೆ ಊಟದ ಭತ್ಯೆ ನೀಡಲು ನಿರ್ಧರಿಸಲಾಗಿದೆ. ನ.14 ರ ನಂತರ ಮಂಡೂರಿಗೆ ಹೋಗುತ್ತಿದ್ದ ಕಸದ ಲಾರಿಗಳನ್ನು ಟೆರ್ರಾಫಾರ್ಮಾ ಹಾಗೂ ಎಂ.ಎಸ್.ಜಿ.ಪಿ  ಘಟಕಗಳಿಗೆ ಕಳುಹಿಸಲಾಗುತ್ತಿದೆ. ಘಟಕಗಳು ನಗರದಿಂದ ದೂರವಿದ್ದು ಕಸ ವಿಲೇವಾರಿ ಮಾಡುವ ವೇಳೆ ಲಾರಿ ಚಾಲಕರು ಘಟಕದಲ್ಲೇ ನಿಂತು ಕಾಯಬೇಕಾಗುತ್ತದೆ. ಹೀಗಾಗಿ ಚಾಲಕರಿಗೆ ದಿನಕ್ಕೆ ರೂ. 200  ಊಟದ ಭತ್ಯೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ಅನಧಿಕೃತ ಒ.ಎಫ್.ಸಿ  ಪರಿಶೀಲನೆಗೆ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಪರಿಶೀಲನೆ ನಡೆಯಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT