ಪತ್ರಿಕಾಗೋಷ್ಠಿ ನಡೆಸಿದ ಕಲಾ ರಂಗ ಲೋಕ ಮತ್ತು ರೋಟರಿ ನ್ಯಾಷನಲ್ ಪಾರ್ಕ್ ನ ಸದಸ್ಯರು 
ಜಿಲ್ಲಾ ಸುದ್ದಿ

ಜುಲೈ 12ರಂದು ನಗರದಲ್ಲಿ 'ಮಳೆ ನಿಲ್ಲುವವರೆಗೆ' ನಾಟಕ ಪ್ರದರ್ಶನ

ಸರ್ಕಾರಿ ಶಾಲೆಯ ಅಭಿವೃದ್ಧಿ ಕಾರ್ಯಕ್ಕಾಗಿ ಹಣದ ಕೊರತೆಯನ್ನು ನೀಗಿಸುವ ಸಲುವಾಗಿ ಕಲಾ ರಂಗ ಲೋಕ ಮತ್ತು ರೋಟರಿ ಬೆಂಗಳೂರು ನ್ಯಾಷನಲ್ ಪಾರ್ಕ್...

ಬೆಂಗಳೂರು: ಸರ್ಕಾರಿ ಶಾಲೆಯ ಅಭಿವೃದ್ಧಿ ಕಾರ್ಯಕ್ಕಾಗಿ ಹಣದ ಕೊರತೆಯನ್ನು ನೀಗಿಸುವ ಸಲುವಾಗಿ ಕಲಾ ರಂಗ ಲೋಕ ಮತ್ತು ರೋಟರಿ ಬೆಂಗಳೂರು ನ್ಯಾಷನಲ್ ಪಾರ್ಕ್ ಸಹಯೋಗದಲ್ಲಿ ಜುಲೈ 12ರಂದು 'ಮಳೆ ನಿಲ್ಲುವವರೆಗೆ' ಎಂಬ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಭಾನುವಾರ ಸಂಜೆ 7 ಗಂಟೆಗೆ ಎಡಿಎ ರಂಗ ಮಂದಿರಲ್ಲಿ ಮಳೆ ನಿಲ್ಲುವವರೆಗೆ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಹವ್ಯಾಸಿ ಕಲಾವಿದರಾದ ಗೋಪಾಲಕೃಷ್ಣ, ಸತೀಶ್ ಐತಾಳ್, ವಿಕಾಸ್, ಸುಬ್ಬು, ಆದರ್ಶ್, ವಿಜು ನಡೆಸಿಕೊಡಲಿದ್ದಾರೆ ಎಂದು ಹವ್ಯಾಸಿ ಕಲಾವಿದರಾದ ಕೆಎಸ್ ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರಿನ ಬಿಳೇಕಳ್ಳಿಯಲ್ಲಿ ಸರ್ಕಾರ ಶಾಲೆಯ ಅಭಿವೃದ್ಧಿ ಕಾರ್ಯಕ್ಕಾಗಿ ರೋಟರಿ ನ್ಯಾಷನಲ್ ಪಾರ್ಕ್ ಮುಂದಾಗಿದ್ದು, ಇದಕ್ಕೆ ತಗಲುವ ವೆಚ್ಚವನ್ನು ಭರಿಸಲು ಕಲಾ ರಂಗ ಲೋಕ ಸಾಥ್ ನೀಡಿದೆ. ನಾಟಕ ಪ್ರದರ್ಶನಕ್ಕೆ bookmyshow.comನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ 9740251718 ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT