ಪತ್ರಿಕಾಗೋಷ್ಠಿ ನಡೆಸಿದ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ಸದಸ್ಯರು 
ಜಿಲ್ಲಾ ಸುದ್ದಿ

ನಾಲ್ಕು ಸಾಮಾನ್ಯ ವಿಮಾ ಕಂಪನಿಗಳ ವಿಲೀನ ಕುರಿತು ಚರ್ಚೆಗೆ ರಾಜ್ಯ ಮಟ್ಟದ ಸಮಾವೇಶ

ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ನಿಗಮದ ನಾಲ್ಕು ಕಂಪನಿಗಳಾದ ನ್ಯಾಷನಲ್ ಇನ್ಷೂರೆನ್ಸ್ ಕಂಪನಿ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ...

ಬೆಂಗಳೂರು: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ನಿಗಮದ ನಾಲ್ಕು ಕಂಪನಿಗಳಾದ ನ್ಯಾಷನಲ್ ಇನ್ಷೂರೆನ್ಸ್ ಕಂಪನಿ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ, ಓರಿಯಂಟಲ್ ಇನ್ಷೂರೆನ್ಸ್ ಕಂಪನಿ ಮತ್ತು ಯುನೈಟೆಡ್ ಇಂಡಿಯಾ ಇನ್ಷೂರೆನ್ಸ್ ಸಂಸ್ಥೆಗಳನ್ನು ವಿಲಿನಗೊಳಿಸಿ 'ಏಕೈಕ ಸಂಸ್ಥೆ' ಯನ್ನು ರಚಿಸುವ ಕುರಿತು ಚರ್ಚಿಸಲು ರಾಜ್ಯ ಮಟ್ಟದ ಸಮಾವೇಶವನ್ನು ಜುಲೈ 11ರಂದು ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ರಮೇಶ್, ಬೆಳಿಗ್ಗೆ 10.30ಕ್ಕೆ ಸೆಂಟ್ರಲ್ ಕಾಲೇಜಿನ ಸೆನೆಟ್ ಸಭಾಂಗಣದಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ
ಕಳೆದ ಎರಡು ವರ್ಷಗಳಲ್ಲೇ ಕೇಂದ್ರ ಸರ್ಕಾರದ ಹಣಕಾಸು ಸೇರ್ಪಡೆ ಕಾರ್ಯಕ್ರಮದ ಅಂಗವಾಗಿ ಈ ನಾಲ್ಕು ಕಂಪನಿಗಳು 1130 ಸಣ್ಣ ಪ್ರಮಾಣದ ಕಛೇರಿಗಳನ್ನು ಸ್ಥಾಪಿಸಿವೆ. ಇವು ಭಾರತದ 640 ಜಿಲ್ಲೆಗಳ ಪೈಕಿ 601 ಜಿಲ್ಲೆಗಳಲ್ಲಿ ಸುಮಾರು 8000 ಕಚೇರಿಗಳನ್ನು ಹೊಂದುವುದರ ಮೂಲಕ ವಿಮಾ ಸೌಲಭ್ಯದ ಸೇವೆಯನ್ನು ನೀಡುತ್ತಿದೆ. ವಿಮಾ ಕಂಪನಿಗಳ ನಡುವಿನ ಆಂತರಿಕ ಪೈಪೋಟಿಯ ಕಾರಣವಾಗಿ ಕಳೆದ 7-8 ವರ್ಷಗಳಲ್ಲಿ ನಾಲ್ಕು ಕಂಪನಿಗಳು 10000 ಕೋಟಿಗಳಷ್ಟು ಪ್ರೀಮಿಯಂ ನಷ್ಟ ಅನುಭವಿಸಿದೆ.
ಈ ಹಿನ್ನಲೆಯಲ್ಲಿ ಈ ನಾಲ್ಕು ಕಂಪನಿಗಳನ್ನು ವಿಲೀನಗೊಳಿಸಿ, ಆಗುವ ನಷ್ಟವನ್ನು ತಡೆಯಬಹುದಾಗಿದೆ. ಈ ನಾಲ್ಕು ಕಂಪನಿಗಳು ವಿಲೀನಗೊಳಿಸುವುದಕ್ಕೆ ಎಲ್ಲಾ ಕಾರ್ಮಿಕರು ಸಮ್ಮತಿಸಿದ್ದು, ಮೇಲಾಧಿಕಾರಿಗಳ ಗಮನಕ್ಕೆ ತರಲೆಂದು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT