ನವಜಾತ ಶಿಶು(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ಕಿಮ್ಸ್ ನಲ್ಲಿ ನವಜಾತ ಶಿಶು ಸಾವು ನಾಲ್ಕಕ್ಕೇರಿಕೆ: ಹೆಚ್ಚಿದ ಆತಂಕ

ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ನಲ್ಲಿ ಸತ್ತಿರುವ ನವಜಾತ ಶಿಶುಗಳ ಸಂಖ್ಯೆ 4 ಕ್ಕೇರಿದೆ.

ಬೆಂಗಳೂರು:  ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ನಲ್ಲಿ ಸತ್ತಿರುವ ನವಜಾತ ಶಿಶುಗಳ ಸಂಖ್ಯೆ 4 ಕ್ಕೇರಿದೆ. ಇದು ದಾಖಲಾಗಿರುವ ಬಾಣಂತಿಯರು ಹಾಗೂ ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಶಿಶುಗಳ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಕೆ.ಸಿ ಜನರಲ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಜಿ.ಎಂ ವಾಮದೇವ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಸರ್ಕಾರಿ ಆಸ್ಪತ್ರೆ ತಜ್ಞ ವೈದ್ಯರ ಜತೆಗೆ ಖಾಸಗಿ ಆಸ್ಪತ್ರೆ ವೈದ್ಯರೊಬ್ಬರು ತನಿಖಾ ತಂಡದಲ್ಲಿದ್ದಾರೆ. ಸೋಮವಾರದೊಳಗೆ ಪ್ರಕರಣದ ಬಗ್ಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ಯಳಚೆನಹಳ್ಳಿ ನಿವಾಸಿ ಮಂಜುನಾಥ ದಾಕ್ಷಾಯಿಣಿ ದಂಪತಿ ಮತ್ತು ಮಾಗಡಿಯ ಹರೀಶ್- ಲಕ್ಷ್ಮಿ ದಂಪತಿ ಶಿಶುಗಳು ಮೃತಪಟ್ಟಿದ್ದವು. ಯಲಹಂಕ ನಿವಾಸಿ ರಾಜೇಶ್- ರೇಖಾ ದಂಪತಿ ಹಾಗೂ ದೇವರಾಜ್-  ಭಾಗ್ಯಲಕ್ಷ್ಮಿ ದಂಪತಿ ಶಿಶುಗಳು ಮೃತಪಟ್ಟಿವೆ.  

ಆಸ್ಪತ್ರೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ತೋರಿದ್ದರಿಂದ ಶಿಶುಗಳ ಸಾವು ಸಂಭವಿಸಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಆದರೆ ಪಾಲಕರ ಆರೋಪವನ್ನು ತಳ್ಳಿಹಾಕಿರುವ ಆಸ್ಪತ್ರೆ ಸಿಬ್ಬಂದಿಗಳು ವಿವಿಧ ಸೋಂಕುಗಳು ಹಾಗೂ ಜನನಪೂರ್ವ ನ್ಯೂನತೆಗಳಿಂದ ಕಾಯಿಲೆಗೆ ತುತ್ತಾಗಿ ಶಿಶುಗಳು ಸಹಜ ಸಾವನ್ನಪ್ಪಿವೆ ಎಂದು ಹೇಳಿಕೆ ನೀಡಿದ್ದಾರೆ. ಆದರೂ 4 ಶಿಶುಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT