ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ವೃತ್ತಿಪರ ಕೋರ್ಸ್ ಗಳಿಗೆ ಸುಳ್ಳು ಪ್ರಮಾಣಪತ್ರ

ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸುಳ್ಳು ಪ್ರಮಾಣ ಪತ್ರ ನೀಡುವ ಕ್ರಮ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನಲಾಗಿದೆ...

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸುಳ್ಳು ಪ್ರಮಾಣ ಪತ್ರ ನೀಡುವ ಕ್ರಮ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನಲಾಗಿದೆ.

ಆರ್ಥಿಕವಾಗಿ ಹಿಂದುಳಿದವರು ಎಂದು ತೋರಿಸಿ ನಕಲಿ ಪ್ರಮಾಣಪತ್ರ ಸಲ್ಲಿಸಿ, ಕೆಲವು ವಿದ್ಯಾರ್ಥಿಗಳು ಇತರ ಹಿಂದುಳಿದ ವರ್ಗಗಳ ವಿಭಾಗದಲ್ಲಿ(ಒಬಿಸಿ ಕೋಟಾ) ಪ್ರವೇಶ ಪಡೆಯಲು ಯತ್ನಿಸುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವನ್ನು ಸಂಪರ್ಕಿಸಿದಾಗ, ನಕಲಿ ಪ್ರಮಾಣಪತ್ರ ಸಲ್ಲಿಸುವುದು ನಮ್ಮ ರಾಜ್ಯದಲ್ಲಿ ಸಹ ಕಂಡುಬರುತ್ತಿದೆ, ಕೆಲವು ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ಒಬಿಸಿ ಕೋಟಾದಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಗಿಟ್ಟಿಸಿಕೊಳ್ಳಲು ಸುಳ್ಳು ಪ್ರಮಾಣಪತ್ರ ಕೊಡುತ್ತಾರೆ ಎಂದು ಹೇಳಿದೆ.

ಈ ವರ್ಷ ಒಬ್ಬ ಎಂಜಿನಿಯರಿಂಗ್ ಮತ್ತು ಓರ್ವ ವೈದ್ಯಕೀಯ ವಿದ್ಯಾರ್ಥಿಗಳ ಪೋಷಕರು ಉತ್ತಮ ಆರ್ಥಿಕ ಸ್ಥಿತಿಯಲ್ಲಿದ್ದರೂ ಸುಳ್ಳು ಪ್ರಮಾಣಪತ್ರ ನೀಡಿ ಶುಲ್ಕದಲ್ಲಿ ವಿನಾಯಿತಿ ಪಡೆದಿದ್ದಾರೆ. ಅವರ ಪೋಷಕರಿಗೆ ನಾವು ನೊಟೀಸು ಕಳುಹಿಸಿದ್ದೇವೆ. ಅಲ್ಲದೆ ಅವರ ಅಂಕಪಟ್ಟಿಗಳ ಪರಿಶೀಲನೆಗೆ ತಹಸೀಲ್ದಾರ್ ರಿಗೆ ಕಳುಹಿಸಿಕೊಡಲಾಗುವುದು ಎಂದು
ತಿಳಿಸಿದರು.

ಕಾನೂನು ಪ್ರಕಾರ ಪೋಷಕರ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇದ್ದರೆ ಮಾತ್ರ ವೃತ್ತಿಪರ ಕೋರ್ಸ್ ಗಳಿಗೆ ಸರ್ಕಾರಿ ಸೀಟು ಪಡೆಯಬಹುದಾಗಿದೆ.ಆದರೆ ಅಕ್ರಮದಿಂದ ನಿಜವಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಸೀಟು ಶುಲ್ಕದಲ್ಲಿ ವಿನಾಯಿತಿ ಸಿಗುವುದಿಲ್ಲ. ಬೆಂಗಳೂರಿನಲ್ಲಿ ಬೇರೆ ಎಲ್ಲಾ ಜಿಲ್ಲೆಗಳಿಗಿಂತ ಹೆಚ್ಚು ನಕಲಿ ಪ್ರಮಾಣಪತ್ರಗಳು ಸಿಗುತ್ತವೆ ಎಂದು ಹೇಳಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ದಾಖಲೆಗಳನ್ನು ಪರಿಶೀಲಿಸಲು ಯಾವುದೇ ಸಾಧನಗಳಿಲ್ಲ. ನಕಲಿ ಪ್ರಮಾಣಪತ್ರಗಳನ್ನು ಗುರುತಿಸುವ ತಂತ್ರಜ್ಞಾನವನ್ನು ಅಳವಡಿಸಿಕೊಡುವಂತೆ ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು ಮನವಿ ಮಾಡಿಕೊಂಡಿದ್ದೇವೆ ಎಂದು ಗಂಗಾಧರಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT