ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಜುಲೈ 17ರಂದು ಖುದ್ದು ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿದೆ 
ಜಿಲ್ಲಾ ಸುದ್ದಿ

ಗ್ಯಾಸ್ ಗೋದಾಮಿಗೆ ತಕರಾರು: 17ರಂದು ಸಿಎಸ್ ಖುದ್ದು ಹಾಜರಿಗೆ ಕೋರ್ಟ್ ಆದೇಶ

ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆಯಲ್ಲಿ ಬಾಂಬ್ ಸ್ಪೋಟದಿಂದ ಮೃತಪಟ್ಟಿದ್ದ ಯೋಧನ ಪತ್ನಿಗೆ ಗೋದಾಮಿನಲ್ಲಿ ಸಿಲಿಂಡರ್ ದಾಸ್ತಾನಿಗೆ ಅಡ್ಡಿಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ...

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆಯಲ್ಲಿ ಬಾಂಬ್ ಸ್ಪೋಟದಿಂದ ಮೃತಪಟ್ಟಿದ್ದ ಯೋಧನ ಪತ್ನಿಗೆ ಗೋದಾಮಿನಲ್ಲಿ ಸಿಲಿಂಡರ್ ದಾಸ್ತಾನಿಗೆ ಅಡ್ಡಿಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಜುಲೈ 17ರಂದು ಖುದ್ದು ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಉಡುಪಿ ಜಿಲ್ಲೆ ಸಾಲಿಗ್ರಾಮ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಿದ ಗೋದಾಮಿನಲ್ಲಿ ಸಿಲೆಂಡರ್ ಗಳ ದಾಸ್ತಾನಿಗೆ ಪಂಚಾಯತಿ ಮುಖ್ಯ ಕಾರ್ಯದರ್ಶಿ ಅನುಮತಿ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಮೃತ ಯೋಧನ ಪತ್ನಿ ಎಂ.ಯು. ಭೋಜಮ್ಮ ಎಂಬುವರು ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ದಾಖಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಸ್ಪಷ್ಟೀಕರಣ ನೀಡಲು ಸ್ವತಹ ಸರ್ಕಾರದ ಮುಖ್ಯ ಕಾರ್ಯದರ್ಶಿ ಜುಲೈ 13ರಂದು ಹೈಕೋರ್ಟ್ ಗೆ ಖುದ್ದು ಹಾಜರಾಗಬೇಕೆಂದು ಸೂಚಿಸಿತ್ತು. ಆದರೆ, ಶುಕ್ರವಾರ ಕಲಾಪದ ಮಧ್ಯೆ ಸರ್ಕಾರದ ಪರ ವಕೀಲೆ ಶ್ವೇತಾ ಕೃಷ್ಣಪ್ಪ ಅವರು ಕೋರ್ಟ್ ಗೆ ಬಂದು, ಮುಖ್ಯ ಕಾರ್ಯದರ್ಶಿ ಅವರ ಹಾಜರಾತಿಗೆ ವಿನಾಯ್ತಿ ನೀಡುವಂತೆ ಕೋರಿದರು.

ಇದಕ್ಕೆ ನ್ಯಾಯಮೂರ್ತಿ ರಾಫವೇಂದ್ರ ಎಸ್.ಚೌಹಾಣ್ ಅಕ್ಷೇಪ ವ್ಯಕ್ತಪಡಿಸಿ ಮುಖ್ಯ ಕಾರ್ಯದರ್ಶಿಯವರಿಗೆ ವಿಚಾರಣೆಗೆ ಬರಲು ಏನು ತೊಂದರೆ? ಅವರೇನು ಬಹಳ ಹೊತ್ತು ನಿಲ್ಲಬೇಕಾಗಿಲ್ಲ, ಕೋರ್ಟ್ ನಲ್ಲಿ ವಿವರಣೆ ಪಡೆದ ನಂತರ ಕಳುಹಿಸಿಕೊಡಲಾಗುವುದು ಎಂದರು.

ಕೊನೆಗೆ ಸರ್ಕಾರಿ ವಕೀಲರು ಪರಿಪರಿಯಾಗಿ ಬೇಡಿಕೊಂಡಾಗ ಜುಲೈ 13ರ ಬದಲು 17ರಂದು ವಿಚಾರಣೆಗೆ ಹಾಜರಾಗಬೇಕೆಂದು ನಿರ್ದೇಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT