ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಭೂಗತ ಪಾತಕಿಗಳಿಗೆ ಸಿಮ್ ಮಾರಾಟ: ನಾಲ್ವರ ಸೆರೆ

ನಕಲಿ ದಾಖಲೆ ಸೃಷ್ಟಿಸಿ ಸಮಾಜಘಾತುಕ ಶಕ್ತಿಗಳಿಗೆ ಮಾತ್ರ ಸಿಮ್ ಕಾರ್ಡ್ ನೀಡುತ್ತಿದ್ದ ನಾಲ್ವರನ್ನು ಪೊಲೀಸ್ ಬಲೆಗೆ ಬಿದ್ದಿದ್ದಾರೆ...

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಸಮಾಜಘಾತುಕ ಶಕ್ತಿಗಳಿಗೆ ಮಾತ್ರ ಸಿಮ್ ಕಾರ್ಡ್ ನೀಡುತ್ತಿದ್ದ ನಾಲ್ವರನ್ನು ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಹನುಮಂತನಗರದ ರಮೇಸ್ (33), ಜಗದೀಶ್(30), ರಾಘವೇಂದ್ರ ಬ್ಲಾಕ್‍ನ ನಿವಾಸಿ ರವಿಕುಮಾರ್(28) ಹಾಗೂ ನಾಗರಾಜು (24) ಬಂಧಿತರು.
ತಮ್ಮ ಅಂಗಡಿಗೆ ಸಿಮ್ ಕಾರ್ಡ್ ಖರೀದಿಸಲು ಬರುವ ಗ್ರಾಹಕರ ದಾಖಲೆ, ಭಾವಚಿತ್ರಗಳನ್ನು ಸಂಗ್ರಹಿಸಿಟ್ಟುಕೊಂಡು ನಂತರ ಅವರ ಹೆಸರಿನಲ್ಲಿ ಭೂಗತ ಪಾತಕಿಗಳಿಗೆ ಸಿಮ್ ಕಾರ್ಡ್ ನೀಡುತ್ತಿದ್ದರು. ಭಯೋತ್ಪಾದಕ ಕೃತ್ಯ ನಡೆಸುವವರು, ಭೂಗತ ಪಾತಕಿಗಳು, ರೌಡಿಗಳು ಸೇರಿದಂತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಹುತೇಕ ಆರೋಪಿಗಳಿಗೆ ಇವರು ಸಿಮ್ ನೀಡಿದ್ದಾರೆ.
ಈ ರೀತಿ ನಕಲಿ ದಾಖಲೆಯನ್ನು ಸೃಷ್ಟಿಸಿ ನಂತರ ಸಿಮ್ ಮಾರಾಟ ಮಾಡಲು ಸುಲಭವಾಗುವಂತೆ ಅಂತರ್ಜಾಲವನ್ನು ಬಳಸುತ್ತಿದ್ದರು ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ. ಆರೋಪಿಗಳಿಂದ ಸಿಮ್ ಕಾರ್ಡ್ ಆಕ್ಟಿವೇಟ್ ಮಾಡಿದ ವೊಡಾಫೋನ್, ಐಡಿಾಯಾ, ಟಾಟಾ ಡೊಕೊಮೊ, ರಿಲಾಯನ್ಸ್, ಏರ್‍ಟೆಲ್, ಏರ್ ಸೆಲ್ ಕಂಪನಿಗಳ 2,310 ಸಿಮïಕಾರ್ಡ್‍ಗಳು ಹಾಗೂ 19 ಮೊಬೈಲ್, ನಕಲಿ ದಾಖಳೆ ಸೃಷ್ಟಿಗೆ ಬಳಸುತ್ತಿದ್ದ ಯಂತ್ರಗಳು ಸೇರಿ ಲಕ್ಷಾಂತರ ರುಪಾಯಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶ್ರೀನಗರದ ಎಸ್.ಎಂ.ಎಸ್ ಆಕ್ಸ್¸ಸರೀಸ್, ಹನುಮಂತನಗರದ ಎಸ್.ಎಲ್.ಎನ್.ಕಮ್ಯುನಿ ಕೇಷನ್, ರಾಘವೇಂದ್ರ ಬ್ಲಾಕ್‍ನ ಎಸ್.ಎಂ. ಎಸ್ ಆಕ್ಸ್ ಸರೀಸ್ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದಿಂದ ಈ ರೀತಿಯ ಕೃತ್ಯ ನಡೆಸುತ್ತಿದ್ದರು. ಇದರ ಹಿಂದೆ ಕೆಲ ಅಧಿಕಾರಿಗಳು ಶಾಮೀಲಾಗಿರುವುದು ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಮೊದ ಮೊದಲು ಸಿಮ್ ಕಾರ್ಡ್ ಗಳನ್ನು ಆಕ್ಟಿವೇಟ್ ಮಾಡಲು ರು.10 ರುಪಾಯಿ ಪಡೆಯುತ್ತಿದ್ದ ಆರೋಪಿಗಳು ಕ್ರಮೇಣವಾಗಿ ರು.100 ರುಪಾಯಿ ಪಡೆಯುತ್ತಿದ್ದರು. ಪ್ರತಿ ಗ್ರಾಹಕರ ಹೆಸರಿನಲ್ಲಿ ನಾಲ್ಕೈದು ಸಿಮ್ ಗಳನ್ನು ಸಮಾಜಘಾತುಕ ಶಕ್ತಿಗಳಿಗೆ ನೀಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT