ರಾಜ್ಯಪಾಲ ವಿ.ಆರ್. ವಾಲಾ 
ಜಿಲ್ಲಾ ಸುದ್ದಿ

ಸರಣಿ ಆತ್ಮಹತ್ಯೆ: ವರದಿ ಕೇಳಿದ ರಾಜ್ಯಪಾಲರು

ರಾಜ್ಯದಲ್ಲಿ ರೈತರ ಆತ್ಯಹತ್ಯೆ ಬಗ್ಗೆ ಕಾಳಜಿ ತೋರಿರುವ ರಾಜ್ಯಪಾಲ ವಿ.ಆರ್. ವಾಲಾ, ಸರ್ಕಾರ ಕೈಗೊಂಡಿರುವ ಕ್ರಮಗಳು, ಮುನ್ನೆಚ್ಚರಿಕೆ ಬಗ್ಗೆ ಸಮಗ್ರ ಮಾಹಿತಿಯನ್ನುವಾರದೊಳಗೆ ಒದಗಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಯಹತ್ಯೆ ಬಗ್ಗೆ ಕಾಳಜಿ ತೋರಿರುವ ರಾಜ್ಯಪಾಲ ವಿ.ಆರ್. ವಾಲಾ, ಸರ್ಕಾರ ಕೈಗೊಂಡಿರುವ ಕ್ರಮಗಳು, ಮುನ್ನೆಚ್ಚರಿಕೆ ಬಗ್ಗೆ ಸಮಗ್ರ ಮಾಹಿತಿಯನ್ನುವಾರದೊಳಗೆ ಒದಗಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರೈತರ ಸರಣಿ ಆತ್ಮಹತ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ದೇಶಾದ್ಯಂತ ವಿಷಯವಾಗಿದೆ. ಎಷ್ಟು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಯಾವ ಕಾರಣಕ್ಕೆ ಸಾವುಗಳು ಸಂಭವಿಸಿವೆ. ಸರ್ಕಾರ ಕೈಗೊಂಡಿರುವ ಈವರೆಗಿನ ಕ್ರಮ ಹಾಗೂ ನೀಡಿರುವ ಪರಿಹಾರದ ಬಗ್ಗೆ ಅಂಕಿ-ಅಂಶಗಳ ಸಹಿತ ಸಮಗ್ರ ಮಾಹಿತಿ ನೀಡಬೇಕು. ಅಲ್ಲದೆ, ರೈತರ ಆತ್ಮಹತ್ಯೆ ತಡೆಗಟ್ಟಲು ಸರ್ಕಾರ ಯಾವ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ಸರ್ಕಾರ ವಿವರವಾಗಿ ನೀಡಬೇಕು ಎಂದು ರಾಜ್ಯಪಾಲರು ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿನ ಲೋಕಾಯುಕ್ತ ಪ್ರಕರಣದಲ್ಲಿ ಅಧಿಕಾರಿಗಳ ಮೇಲೆ ಸರ್ಕಾರ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿಳಂಬ ನೀತಿಗೆ ಏನು ಕಾರಣ? ಅದಲ್ಲದೆ, ಲೋಕಾಯುಕ್ತ ಭ್ರಷ್ಟಾಚಾರದಲ್ಲಿ ಸರ್ಕಾರದ ಕ್ರಮಗಳ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ವಿವರಣೆಯನ್ನು ಕೋರಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದವು. ಆದರೆ, ರಾಜ್ಯಪಾಲರ ಪತ್ರದ ಬಗ್ಗೆ ಸಿಎಂ ಕಚೇರಿಯ ಮೂಲಗಳು ಸ್ಪಷ್ಟನೆ ನೀಡಿದ್ದು, ರೈತರ ಆತ್ಮಹತ್ಯೆ ಕುರಿತಾದ ಮಾಹಿತಿಯನ್ನಷ್ಟೇ ರಾಜ್ಯಪಾಲರು ಕೇಳಿದ್ದಾರೆ ಎಂದು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT