ಕರ್ನಾಟಕ ಹೈ ಕೋರ್ಟ್ 
ಜಿಲ್ಲಾ ಸುದ್ದಿ

ಸಹಾಯಕ ಪ್ರಾಧ್ಯಾಪಕ ಸಿದ್ದಪ್ಪ ನಿರ್ದೋಷಿ

ಬೆಂಗಳೂರು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ನ (ಐಐಎಂ-ಬಿ) ಸಹಾಯಕ ಪ್ರಾಧ್ಯಾಪಕರಾಗಿದ್ದ ಎಂ.ಸಿದ್ದಪ್ಪ ನಿರ್ದೋಷಿ ಎಂಬ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠವೂ ಎತ್ತಿ ಹಿಡಿದಿದೆ...

ಬೆಂಗಳೂರು: ಬೆಂಗಳೂರು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ನ (ಐಐಎಂ-ಬಿ) ಸಹಾಯಕ ಪ್ರಾಧ್ಯಾಪಕರಾಗಿದ್ದ ಎಂ.ಸಿದ್ದಪ್ಪ ನಿರ್ದೋಷಿ ಎಂಬ ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠವೂ ಎತ್ತಿ ಹಿಡಿದಿದೆ.

ಈ ಸಂಬಂಧ ಐಐಎಂ-ಬಿ ಆಡಳಿತ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಹಾಗೂ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ವಿಭಾಗೀಯ ಪೀಠ ಇತ್ಯರ್ಥಪಡಿಸಿದೆ. ಸಿದ್ದಪ್ಪನವರು ಅಮಾನತುಗೊಂಡ ದಿನದಿಂದ ನಿವೃತ್ತಿ ಆಗುವವರೆಗಿನ 9 ವರ್ಷಗಳ ಉಳಿಕೆ ಸೇವಾವಧಿಯ ಎಲ್ಲ ವೇತನ ಹಾಗೂ ಇತರೆ ಆರ್ಥಿಕ ಸೌಲಭ್ಯಗಳನ್ನು ಸಂಸ್ಥೆಯು ಮುಂದಿನ 60 ದಿನಗಳಲ್ಲಿ ನೀಡಬೇಕು ಎಂದು ವಿಭಾಗೀಯ ಪೀಠ ಆದೇಶಿಸಿದೆ.

ಮೂಲತಃ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಅಣಬೇರು ಗ್ರಾಮದವರಾದ ಸಿದ್ದಪ್ಪನವರು, 1974ರಲ್ಲಿ ಬೆಂಗಳೂರು ಐಐಎಂಗೆ ಸೇರ್ಪಡೆಯಾಗುವ ಮುನ್ನ ಆಹಮದಾಬಾದ್ ಐಐಎಂನಲ್ಲಿ ಒಂದು ವರ್ಷ ಮತ್ತು ಮುಂಬೈ ಐಐಎಂನಲ್ಲಿ ಮೂರು ವರ್ಷ ಹಣಕಾಸು ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

1986ರ ಜುಲೈ ತಿಂಗಳಿನಲ್ಲಿ ಐಐಎಂ-ಬಿ ಕ್ಯಾಂಪಸ್‍ನಲ್ಲಿ ಸಂಸ್ಥೆಯ ನೌಕರರ ಸಂಘದ ಕೆಲವರು ಮತ್ತು ಸಿದ್ದಪ್ಪನವರ ಮಧ್ಯೆ ಅಹಿತಕರ ಘಟನೆಯೊಂದು ನಡೆದಿತ್ತು. ಈ ಸಂಬಂಧ ಸಂಸ್ಥೆಯ ಆಂತರಿಕ ಸಮಿತಿ ತನಿಖೆ ನಡೆಸಿ ಸಿದ್ದಪ್ಪ ಮತ್ತು ಇತರೆ ಎಲ್ಲ ಆರೋಪಿಗಳನ್ನು ತಪ್ಪಿತಸ್ಥರು ಎಂದು ಗುರುತಿಸಲಾಗಿತ್ತು. ಹೀಗಾಗಿ 1986ರಲ್ಲಿ ಸಿದ್ದಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

ಸಂಸ್ಥೆಯ ಅಮಾನತು ಆದೇಶ ಕಾನೂನುಬಾಹಿರ ಎಂದು ಪ್ರೊ.ಸಿದ್ದಪ್ಪ 1993ರಲ್ಲಿ ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ 2006ರಲ್ಲಿ ಸಿದ್ದಪ್ಪನವರು ನಿರ್ದೋಷಿ ಎಂದು ಆದೇಶಿಸಿ ಅವರಿಗೆ ಸೇರಬೇಕಾದ ಬಾಕಿ ಹಣ ಹಾಗೂ ಇತರೆ ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿತ್ತು. ಏಕಸದಸ್ಯ ಪೀಠದ ಈ ಆದೇಶ ಪ್ರಶ್ನಿಸಿ ಆಡಳಿತ ಮಂಡಳಿ 2006ರಲ್ಲಿ ವಿಭಾಗೀಯ ಪೀಠದಲ್ಲಿ ರಿಟ್ ಮೇಲ್ಮನವಿ ಸಲ್ಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT