ಶಸ್ತ್ರಾಸ್ತ್ರ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ ಹಿನ್ನೆಲೆ ಶಸ್ತ್ರಾಸ್ತ್ರ ಮರಳಿಸಲು ಸೂಚನೆ

ಪರವಾನಗಿ ಪಡೆದು ಪಿಸ್ತೂಲ್ ಸೇರಿದಂತೆ ವಿವಿಧ ಶಸ್ತ್ರಾಸ್ತ್ರಗಳನ್ನು ಹೊಂದಿರುವವರು ಆಯಾ ಸರಹದ್ದಿನ ಪೊಲೀಸ್ ಠಾಣೆಗೆ ಮರಳಿಸುವಂತೆ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶಿಸಿದ್ದಾರೆ.

ಬೆಂಗಳೂರು: ಪರವಾನಗಿ ಪಡೆದು ಪಿಸ್ತೂಲ್ ಸೇರಿದಂತೆ ವಿವಿಧ ಶಸ್ತ್ರಾಸ್ತ್ರಗಳನ್ನು ಹೊಂದಿರುವವರು ಆಯಾ ಸರಹದ್ದಿನ ಪೊಲೀಸ್ ಠಾಣೆಗೆ ಮರಳಿಸುವಂತೆ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಘೋಷಣೇಯಾಗಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಶಸ್ತ್ರಾಸ್ತ್ರ ಹೊಂದಿರುವ ಖಾಸಗಿ ವ್ಯಕ್ತಿಗಳು ಆ.10 ಒಳಗೆ ಪೊಲೀಸರ ವಶಕ್ಕೆ ಒಪ್ಪಿಸಬೇಕು. ಚುನಾವಣೆ ಮುಗಿದ ನಂತರ ಆ.26 ನಂತರ ಸಂಬಂಧಿಸಿದ ದಾಖಲೆ ಒದಗಿಸಿ ವಾಪಸ್ ಪಡೆಯಬಹುದು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.
 
ಶಸ್ತ್ರಾಸ್ತ್ರ ಇಟ್ಟುಕೊಳ್ಳುವುದು ಅಗತ್ಯವಿದ್ದಲ್ಲಿ ಅಂತಹ ವ್ಯಕ್ತಿಗಳು ಆ.10 ರ ಒಳಗೆ ಸ್ಪಷ್ಟ ಕಾರಣವನ್ನು ಲಿಖಿತ ರೂಪದಲ್ಲಿ ಆಯಾ ವಿಭಾಗದ ಡಿಸಿಪಿಗೆ ಮನವಿ ಸಲ್ಲಿಸಬೇಕು. ಪರಿಶೀಲನೆ ಬಳಿಕ ದಿಸ್ಪಿ ಅವರು ಶಸ್ತ್ರಾಸ್ತ್ರ ಶರಣಾಗತಿಗೆ ವಿನಾಯಿತಿ ನೀಡಬೇಕೇ ಬೇಡವೇ ಎಂಬುದನ್ನು ನಿರ್ಧಾರ ಮಾಡಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆ ಅಧಿಕಾರಿಗಳು ಭದ್ರತೆ ದೃಷ್ಟಿಯಿಂದ ಅನುಮತಿ ನೀಡಲಾಗಿರುವ ಬ್ಯಾಂಕ್ ಗಳು, ಸೆಕ್ಯುರಿಟಿ ಏಜೆನ್ಸಿ ಮುಂತಾದ ಸಂಸ್ಥೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ಲಾಸ್-1  ಗೆಜೆಟೆಡ್ ಅಧಿಕಾರಿಗಳಿಗೆ ಶಸ್ತ್ರಾಸ್ತ್ರ ಶರಣಾಗತಿ ಆದೇಶ ಅನ್ವಯ ಆಗುವುದಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT