ಶಸ್ತ್ರಾಸ್ತ್ರ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ ಹಿನ್ನೆಲೆ ಶಸ್ತ್ರಾಸ್ತ್ರ ಮರಳಿಸಲು ಸೂಚನೆ

ಪರವಾನಗಿ ಪಡೆದು ಪಿಸ್ತೂಲ್ ಸೇರಿದಂತೆ ವಿವಿಧ ಶಸ್ತ್ರಾಸ್ತ್ರಗಳನ್ನು ಹೊಂದಿರುವವರು ಆಯಾ ಸರಹದ್ದಿನ ಪೊಲೀಸ್ ಠಾಣೆಗೆ ಮರಳಿಸುವಂತೆ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶಿಸಿದ್ದಾರೆ.

ಬೆಂಗಳೂರು: ಪರವಾನಗಿ ಪಡೆದು ಪಿಸ್ತೂಲ್ ಸೇರಿದಂತೆ ವಿವಿಧ ಶಸ್ತ್ರಾಸ್ತ್ರಗಳನ್ನು ಹೊಂದಿರುವವರು ಆಯಾ ಸರಹದ್ದಿನ ಪೊಲೀಸ್ ಠಾಣೆಗೆ ಮರಳಿಸುವಂತೆ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಘೋಷಣೇಯಾಗಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಶಸ್ತ್ರಾಸ್ತ್ರ ಹೊಂದಿರುವ ಖಾಸಗಿ ವ್ಯಕ್ತಿಗಳು ಆ.10 ಒಳಗೆ ಪೊಲೀಸರ ವಶಕ್ಕೆ ಒಪ್ಪಿಸಬೇಕು. ಚುನಾವಣೆ ಮುಗಿದ ನಂತರ ಆ.26 ನಂತರ ಸಂಬಂಧಿಸಿದ ದಾಖಲೆ ಒದಗಿಸಿ ವಾಪಸ್ ಪಡೆಯಬಹುದು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.
 
ಶಸ್ತ್ರಾಸ್ತ್ರ ಇಟ್ಟುಕೊಳ್ಳುವುದು ಅಗತ್ಯವಿದ್ದಲ್ಲಿ ಅಂತಹ ವ್ಯಕ್ತಿಗಳು ಆ.10 ರ ಒಳಗೆ ಸ್ಪಷ್ಟ ಕಾರಣವನ್ನು ಲಿಖಿತ ರೂಪದಲ್ಲಿ ಆಯಾ ವಿಭಾಗದ ಡಿಸಿಪಿಗೆ ಮನವಿ ಸಲ್ಲಿಸಬೇಕು. ಪರಿಶೀಲನೆ ಬಳಿಕ ದಿಸ್ಪಿ ಅವರು ಶಸ್ತ್ರಾಸ್ತ್ರ ಶರಣಾಗತಿಗೆ ವಿನಾಯಿತಿ ನೀಡಬೇಕೇ ಬೇಡವೇ ಎಂಬುದನ್ನು ನಿರ್ಧಾರ ಮಾಡಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆ ಅಧಿಕಾರಿಗಳು ಭದ್ರತೆ ದೃಷ್ಟಿಯಿಂದ ಅನುಮತಿ ನೀಡಲಾಗಿರುವ ಬ್ಯಾಂಕ್ ಗಳು, ಸೆಕ್ಯುರಿಟಿ ಏಜೆನ್ಸಿ ಮುಂತಾದ ಸಂಸ್ಥೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ಲಾಸ್-1  ಗೆಜೆಟೆಡ್ ಅಧಿಕಾರಿಗಳಿಗೆ ಶಸ್ತ್ರಾಸ್ತ್ರ ಶರಣಾಗತಿ ಆದೇಶ ಅನ್ವಯ ಆಗುವುದಿಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT