ಸರಗಳ್ಳನಿಗೆ ಸಾರ್ವಜನಿಕರಿಂದ ಗೂಸಾ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಸರಗಳ್ಳನಿಗೆ ಸಾರ್ವಜನಿಕರಿಂದ ಗೂಸಾ

ಬಸ್‍ಗಾಗಿ ಕಾಯುತ್ತ ನಿಂತಿದ್ದ ಯುವತಿಯ ಸರ ಅಪಹರಿಸಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಿದ್ಧಾಪುರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ...

ಬೆಂಗಳೂರು: ಬಸ್‍ಗಾಗಿ ಕಾಯುತ್ತ ನಿಂತಿದ್ದ ಯುವತಿಯ ಸರ ಅಪಹರಿಸಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಿದ್ಧಾಪುರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಸಿದ್ದಾಪುರ ನಿವಾಸಿ ರಂಗನಾಥ (35) ಬಂಧಿತ. ಆರೋಪಿಯು ಅಶೋಕ ಪಿಲ್ಲರ್ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳು ಧರಿಸಿದ್ದ ಬೆಳ್ಳಿ ಸರ ದೋಚಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಕಿರುಚಿಕೊಂಡಿದ್ದು, ಸ್ಥಳದಲ್ಲಿದ್ದ ಜನರೇ ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಯನಗರ 1ನೇ ಹಂತದ ನಿವಾಸಿಯಾದ ಯುವತಿ ಕಾಲ್‍ಸೆಂಟರ್‍ನಲ್ಲಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಬಸ್‍ಗಾಗಿ ಕಾಯುತ್ತಿದ್ದಾಗ ಘಟನೆ ನಡೆದಿದೆ. ಬಸ್ ನಿಲ್ದಾಣದ ಬಳಿ ಒಬ್ಬಳೇ ಇದ್ದ ಕಾರಣ ಆರೋಪಿ ಸರ ದೋಚಲು ಯತ್ನಿಸಿದ್ದಾನೆ. ಸ್ಥಳೀಯರು ತಕ್ಷಣ ಆಕೆ ನೆರವಿಗೆ ಧಾವಿಸಿದ್ದರಿಂದ ಅನಾಹುತ ಸಂಭವಿಸಿಲ್ಲ. ಆರೋಪಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೌಸ್ ಬಾಯï ಆಗಿ ಕೆಲಸ ಮಾಡುತ್ತಿದ್ದು, ಮಾನಸಿಕವಾಗಿ ಆತ ಸರಿಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆತನ ಕುಟುಂಬ ಸದಸ್ಯರನ್ನು ಕರೆಸಿ ವಿಚಾರಣೆ ನಡೆಸಿ, ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

ಕಾಂಗ್ರೆಸ್‌ ಪ್ರತಿಭಟನೆಗೆ ಹೊಸ ಅಸ್ತ್ರ: ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!

ಚುಮು ಚುಮು ಚಳಿಯಲಿ ಆಹಾರ ಹೀಗಿರಲಿ (ಕುಶಲವೇ ಕ್ಷೇಮವೇ)

MUDA Scam: ಮಾಜಿ ಆಯುಕ್ತರಿಂದ ಸಂಬಂಧಿಕರ ಮೂಲಕ ನಗದು ಲಂಚ ಪಡೆದು ನಿವೇಶನ ಹಂಚಿಕೆ!

SCROLL FOR NEXT