ಬಿಬಿಎಂಪಿ 
ಜಿಲ್ಲಾ ಸುದ್ದಿ

ಬಿಬಿಎಂಪಿ ವಿಭಜನೆ ವಿರೋಧಿಸಿ ಪ್ರತಿಭಟನೆ

ಬಿಬಿಎಂಪಿ ತ್ರಿಭಜನೆಗೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಕಾರ್ಯಕರ್ತರು ಗುರುವಾರ ಆನಂದ್‍ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು...

ಬೆಂಗಳೂರು: ಬಿಬಿಎಂಪಿ ತ್ರಿಭಜನೆಗೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಕಾರ್ಯಕರ್ತರು ಗುರುವಾರ ಆನಂದ್‍ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಈಗಿರುವ ಬಿಬಿಎಂಪಿಯನ್ನೂ ಮೂರು ಭಾಗಗಳನ್ನಾಗಿ ವಿಂಗಡಿಸಿದಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗಲಿದ್ದಾರೆ. ನಗರದಲ್ಲಿ ಹೊರರಾಜ್ಯದವರೇ\ ಹೆಚ್ಚಿದ್ದಾರೆ. ವಿಭಜನೆ ಮಾಡಿದಲ್ಲಿ ತೆಲುಗು, ತಮಿಳು ಹೀಗೆ ಭಾಷಾವಾರು ವಿಂಗಡಣೆಯಾಗಿ ಅಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗಲಿದ್ದಾರೆ. ಬೇರೆಯವರ ಆಡಳಿತಕ್ಕೆ ಕನ್ನಡಿಗರು ಬಲಿಯಾಗಬೇಕಾಗುತ್ತದೆ.

ಹಾಗಾಗಿ ವಿಭಜನೆ ಮಾಡಬಾರದೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹೇಮಲತಾ, ನಗರ ಜಿಲ್ಲಾಧ್ಯಕ್ಷ ಸಹನಾ ಶೇಖರ್, ರಾಜ್ಯ ಕಾರ್ಯದರ್ಶಿ ಅಶ್ವಿನಿ, ಸುನಂದ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT