29ಕ್ಕೆ ಲೋಕಾ ತಿದ್ದುಪಡಿ ವಿಧೇಯಕ ಮಂಡನೆ? (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

29ಕ್ಕೆ ಲೋಕಾ ತಿದ್ದುಪಡಿ ವಿಧೇಯಕ ಮಂಡನೆ?

ಬಹು ವಿವಾದಿತ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಜು.29ರಂದು ಮಂಡಿಸಲಿದೆ...

ವಿಧಾನಸಭೆ: ಬಹು ವಿವಾದಿತ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಜು.29ರಂದು ಮಂಡಿಸಲಿದೆ.

ಲೋಕಾಯುಕ್ತ ವಿಧೇಯಕದ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಾತ್ವಿಕ ಭಿನ್ನಾಭಿಪ್ರಾಯ ಹೊಂದಿದ್ದು, ಈ ಬಗ್ಗೆ ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆಯುವಂತೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸರ್ಕಾರಕ್ಕೆ ವಿಧೇಯಕ ಮಂಡನೆ ಅಸಾಧ್ಯವಾಗಿದ್ದು, ವಿಧಾನ ಮಂಡಲದ ಅಧಿವೇಶನವನ್ನು ಇನ್ನೂ ಎರಡು ದಿನ ವಿಸ್ತರಿಸಲು ಸಿದ್ಧತೆ ನಡೆಸಲಾಗಿದೆ. ಶುಕ್ರವಾರ ಬೆಳಗ್ಗೆ ನಡೆಯುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.

ರಾಷ್ಟ್ರಪತಿ ಅವರ 2 ದಿನಗಳ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಜು.27, 28ರಂದು ಅ„ವೇಶನ ಇರುವುದಿಲ್ಲ. 29ರಿಂದ ಅಧಿವೇಶನ 2 ದಿನ ನಡೆದರೆ ಅಂದೇ (ಬುಧವಾರ) ಈ ವಿಧೇಯಕ ಮಂಡನೆ ಆಗಲಿದೆ. ಲೋಕಾಯುಕ್ತರು ಪ್ರತಿ ವರ್ಷ ಸರ್ಕಾರಕ್ಕೆ ವರದಿ ನೀಡುವಂತೆ ಅವಕಾಶ ಕಲ್ಪಿಸಲು ಈ ಹಿಂದೆ ತಂದಿದ್ದ ತಿದ್ದುಪಡಿ ವಿಧೇಯಕವನ್ನು ಗುರುವಾರ ಬೆಳಗ್ಗೆ ಸರ್ಕಾರ ಹಿಂಪಡೆದುಕೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅನುಪಸ್ಥಿತಿಯಲ್ಲಿ ವೈದ್ಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ವಿಧೇಯಕ ವಾಪಸ್ ಪಡೆದರು.ಜತೆಗೆ ಸಮಗ್ರ ತಿದ್ದುಪಡಿ ವಿಧೇಯಕವನ್ನು ಮಂಡಿಸಲು ಮುಂದಾದರು.

ಆದರೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆ.ಜಿ.ಬೋಪಯ್ಯ, ವೈ.ಎಸ್.ವಿ.ದತ್ತ, ವಿಶ್ವೇಶ್ರ ಹೆಗಡೆ ಕಾಗೇರಿ, ಸಿ.ಟಿ.ರವಿ ಪ್ರತಿಪಕ್ಷ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ಇಲಾಖಾವಾರು ಬೇಡಿಕೆ ಚರ್ಚೆ ಬಳಿಕ ವಿಧೇಯಕ ಮಂಡನೆಗೆ ಅವಕಾಶ ಕಲ್ಪಿಸುವುದಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ತಿಳಿಸಿದರು. ಆದರೆ ಮಧ್ಯಾಹ್ನದ ಬಳಿಕವೂ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಮಂಡನೆಗೆ ಅವಕಾಶ ಸಿಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT