29ಕ್ಕೆ ಲೋಕಾ ತಿದ್ದುಪಡಿ ವಿಧೇಯಕ ಮಂಡನೆ? (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

29ಕ್ಕೆ ಲೋಕಾ ತಿದ್ದುಪಡಿ ವಿಧೇಯಕ ಮಂಡನೆ?

ಬಹು ವಿವಾದಿತ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಜು.29ರಂದು ಮಂಡಿಸಲಿದೆ...

ವಿಧಾನಸಭೆ: ಬಹು ವಿವಾದಿತ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಜು.29ರಂದು ಮಂಡಿಸಲಿದೆ.

ಲೋಕಾಯುಕ್ತ ವಿಧೇಯಕದ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತಾತ್ವಿಕ ಭಿನ್ನಾಭಿಪ್ರಾಯ ಹೊಂದಿದ್ದು, ಈ ಬಗ್ಗೆ ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆಯುವಂತೆ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸರ್ಕಾರಕ್ಕೆ ವಿಧೇಯಕ ಮಂಡನೆ ಅಸಾಧ್ಯವಾಗಿದ್ದು, ವಿಧಾನ ಮಂಡಲದ ಅಧಿವೇಶನವನ್ನು ಇನ್ನೂ ಎರಡು ದಿನ ವಿಸ್ತರಿಸಲು ಸಿದ್ಧತೆ ನಡೆಸಲಾಗಿದೆ. ಶುಕ್ರವಾರ ಬೆಳಗ್ಗೆ ನಡೆಯುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.

ರಾಷ್ಟ್ರಪತಿ ಅವರ 2 ದಿನಗಳ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಜು.27, 28ರಂದು ಅ„ವೇಶನ ಇರುವುದಿಲ್ಲ. 29ರಿಂದ ಅಧಿವೇಶನ 2 ದಿನ ನಡೆದರೆ ಅಂದೇ (ಬುಧವಾರ) ಈ ವಿಧೇಯಕ ಮಂಡನೆ ಆಗಲಿದೆ. ಲೋಕಾಯುಕ್ತರು ಪ್ರತಿ ವರ್ಷ ಸರ್ಕಾರಕ್ಕೆ ವರದಿ ನೀಡುವಂತೆ ಅವಕಾಶ ಕಲ್ಪಿಸಲು ಈ ಹಿಂದೆ ತಂದಿದ್ದ ತಿದ್ದುಪಡಿ ವಿಧೇಯಕವನ್ನು ಗುರುವಾರ ಬೆಳಗ್ಗೆ ಸರ್ಕಾರ ಹಿಂಪಡೆದುಕೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅನುಪಸ್ಥಿತಿಯಲ್ಲಿ ವೈದ್ಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ವಿಧೇಯಕ ವಾಪಸ್ ಪಡೆದರು.ಜತೆಗೆ ಸಮಗ್ರ ತಿದ್ದುಪಡಿ ವಿಧೇಯಕವನ್ನು ಮಂಡಿಸಲು ಮುಂದಾದರು.

ಆದರೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆ.ಜಿ.ಬೋಪಯ್ಯ, ವೈ.ಎಸ್.ವಿ.ದತ್ತ, ವಿಶ್ವೇಶ್ರ ಹೆಗಡೆ ಕಾಗೇರಿ, ಸಿ.ಟಿ.ರವಿ ಪ್ರತಿಪಕ್ಷ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಹೀಗಾಗಿ ಇಲಾಖಾವಾರು ಬೇಡಿಕೆ ಚರ್ಚೆ ಬಳಿಕ ವಿಧೇಯಕ ಮಂಡನೆಗೆ ಅವಕಾಶ ಕಲ್ಪಿಸುವುದಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ತಿಳಿಸಿದರು. ಆದರೆ ಮಧ್ಯಾಹ್ನದ ಬಳಿಕವೂ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಮಂಡನೆಗೆ ಅವಕಾಶ ಸಿಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT