ಇಂದು ಪತ್ರಿಕಾ ದಿನಾಚರಣೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಇಂದು ಪತ್ರಿಕಾ ದಿನಾಚರಣೆ

ಕರ್ನಾಟಕ ರಾಜ್ಯ ಪತ್ರಕರ್ತರ ಅಧ್ಯಯನ ಕೇಂದ್ರವು ಶನಿವಾರ ಪತ್ರಿಕಾ ದಿನಾಚರಣೆಯನ್ನು ಆಚರಿಸುತ್ತಿದೆ...

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಕರ್ತರ ಅಧ್ಯಯನ ಕೇಂದ್ರವು ಶನಿವಾರ ಪತ್ರಿಕಾ ದಿನಾಚರಣೆಯನ್ನು ಆಚರಿಸುತ್ತಿದೆ.

ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ಬೆಳಗ್ಗೆ 10ಗಂಚೆಗೆ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಉದ್ಗಾಟಿಸಲಿದ್ದಾರೆ. ಐಐಜೆಎನ್ ಎಂ ನ ಪ್ರಾಧ್ಯಾಪಕರಾಗಿರುವ ಪತ್ರಕರ್ತೆ ಕಂಚನ್ ಕೌರ್, ನಟ ಚೇತನ್ ಮುಖ್ಯ ಅತಿಥಿಗಳಾಗಿರುವ ಕಾರ್ಯಕ್ರಮದ ಅಧ್ಯಕ್ಷತೆ ಕೇರಳದ ಖ್ಯಾತ ಪತ್ರಕರ್ತೆ ಕೆ. ಶಾಹಿನಾ ಅವರದು.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸಲಿದ್ದು, ಹಲವು ಕಾಲೇಜುಗಳ ಪತ್ರಿಕೋದ್ಯಮ ವಿದ್ಯಾರ್ಥಿಗಳೂ ಭಾಗವಹಿಸಲಿದ್ದಾರೆ. ಮಕ್ಕಳ ಹಕ್ಕುಗಳಿಗೆ ತೊಡಕಾಗಿರುವ ಧಾರ್ಮಿಕ ಮೂಲಭೂತವಾದದ ಕುರಿತು ಮಂಗಳೂರಿನ ಇರ್ಷಾದ್ ಉಪ್ಪಿನಂಗಡಿ ರಚಿಸಿರುವ ಸ್ವರ್ಗದ ಹಾದಿಯಲ್ಲಿ ಕಮರುತ್ತಿರುವ ಕನಸುಗಳು ಸಾಕ್ಷ್ಯ ಚಿತ್ರ ಬಿಡುಗಡೆ ಮತ್ತು ಪ್ರದರ್ಶನವೂ ನಡೆಯಲಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿರುವ ಡಾ.ಕೃಪಾ ಆಳ್ವ, ಮಕ್ಕಳ ಹಕ್ಕುಗಳ ಕಾರ್ಯಕರ್ತರಾಗಿರುವ ದಿನೇಶ್ ಹೆಗ್ಡೆ ಉಳೆಪಾಡಿ ಭಾಗವಹಿಸಲಿದ್ದಾರೆ.

ಜಾತಿ-ಲಿಂಗ ತಾರತಮ್ಯ ಮತ್ತು ಮಾಧ್ಯಮಗಳ ಹೊಣೆಗಾರಿಕೆ ಎಂಬ ವಿಷಯದ ಕುರಿತು ವಿಚಾರ ಸಂಕಿರಣ, ಜಾತಿ ತಾರತಮ್ಯ ಮತ್ತು ಮಾಧ್ಯಮಗಳ ಹೊಮೆಗಾರಿಕೆಯ ಬಗ್ಗೆ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಭಾಷಣ, ಲಿಂಗ ತಾರತಮ್ಯ ಮತ್ತು ಸಾಮಾಜಿಕ ಹೊಣೆಗಾರಿಕೆಯ ಬಗ್ಗೆ ಸಾಹಿತಿ ಎಂ.ಎಸ್ ಆಶಾದೇವಿ ವಿಷಯ ಮಂಡಿಸಲಿದ್ದಾರೆ. ಪತ್ರಕರ್ತ ಲಕ್ಷ್ಮ ಹೂಗಾರ್ ವಿಚಾರಣ ಸಂಕಿರಣದ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಕರ್ತ ಇಂದೂಧರ ಹೊನ್ನಾಪುರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪದಲ್ಲಿ ಪತ್ರಕರ್ತರಾದ ಅಬ್ದುಸ್ಸಾಲಂ ಪುತ್ತಿಗೆ ಹಾಗೂ ನಾಗಣ್ಣ ತುಮಕೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT