ಮುಖ್ಯಮಂತ್ರಿ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

೨೦೨೦ರ ನಂತರವೂ ಮುಖ್ಯಮಂತ್ರಿಯಾಗಿರುತ್ತೇನೆ: ಸಿದ್ದರಾಮಯ್ಯ

ತಮ್ಮ ಐದು ವರ್ಷಗಳ ಪೂರ್ಣಾವಧಿಯವರೆಗೆ ಮುಖ್ಯಮಂತ್ರಿಯಾಗಿರುವುದಲ್ಲದೆ ೨೦೧೮ರ ವಿಧಾನಸಭಾ ಚುನಾವಣೆಗಳಿಗೂ ಮುಂದಾಳತ್ವ

ಬೆಂಗಳೂರು: ತಮ್ಮ ಐದು ವರ್ಷಗಳ ಪೂರ್ಣಾವಧಿಯವರೆಗೆ ಮುಖ್ಯಮಂತ್ರಿಯಾಗಿರುವುದಲ್ಲದೆ ೨೦೧೮ರ ವಿಧಾನಸಭಾ ಚುನಾವಣೆಗಳಿಗೂ ಮುಂದಾಳತ್ವ ವಹಿಸಿ ೨೦೨೦ರ ನಂತರವೂ ಮುಖ್ಯಮಂತ್ರಿಯಾಗಿ ಉಳಿಯುತ್ತೇನೆ ಎಂದು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ತಾವು ಮೂಲತಃ ಕಾಂಗ್ರೆಸ್ ಸದಸ್ಯನಲ್ಲ ಎಂದು ಒಪ್ಪಿಕೊಂಡ ಅವರು ಆದರೆ ಪಕ್ಷದ ಮತ್ತು ಹೈಕಮ್ಯಾಂಡಿನ ಸಂಪೂರ್ಣ ಬೆಂಬಲ ತಮಗಿದೆ ಎಂದು ಹೇಳಿಕೊಂಡಿದ್ದಾರೆ ಅಲ್ಲದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ ಪರಮೇಶ್ವರ್ ಜೊತೆಗೆ ಒಳ್ಳೆಯ ಸಂಬಂಧ ಇದೆ ಎಂದಿದ್ದಾರೆ.

ವಿಧಾನಪರಿಷತ್ತಿನಲ್ಲಿ ವಿರೋಧಪಕ್ಷದ ನಾಯಕೆ ಕೆ ಎಸ ಈಶ್ವರಪ್ಪ, ಮುಖ್ಯಮಂತ್ರಿಗೆ ತಮ್ಮ ಪಕ್ಷದಲ್ಲೇ ಬೆಂಬಲ ಇಲ್ಲ ಎಂದಾಗ "ನಾನು ನನ್ನ ಪೂರ್ಣಾವಧಿಯನ್ನು ಪೂರೈಸುವುದಲ್ಲದೆ, ೨೦೨೦ರನಂತರವೂ ಮುಖ್ಯಮಂತ್ರಿಯಾಗಿರುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣದಂತೆ ಬಿಜೆಪಿ ಸದಸ್ಯರಿಗೆ ಸೂಚಿಸಿರುವ ಅವರು "ನನ್ನ ಒಳ್ಳೆಯ ಆಡಳಿತವನ್ನು ನೋಡಿ ಜನರು ೨೦೧೮ರಲ್ಲಿ ನಮ್ಮನ್ನು ಮತ್ತೆ ಆಯ್ಕೆ ಮಾಡುತ್ತಾರೆ. ಈಶ್ವರಪ್ಪ ನಿಮಗೆ ರಾಜ್ಯದ ಮುಖ್ಯಮಂತ್ರಿಯಾಗುವ ಆಸೆ ಇದೆಯೇ?" ಎಂದು ಕುಟುಕಿದ್ದಾರೆ.

ರಾಜ್ಯದ ವಿತ್ತೀಯ ಪರಿಸ್ಥಿತಿಯ ಬಗ್ಗೆ ಅವರು ಮಾತನಾಡಿದ್ದು "ಕೇಂದ್ರದ ಅನುದಾನದ ಕಡಿತದ ಹೊರತಾಗಿಯೂ ರಾಜ್ಯ ಸರ್ಕಾರ ಒಳ್ಳೆಯ ಸ್ಥಿತಿಯಲ್ಲಿದೆ" ಎಂದಿದ್ದಾರೆ.

ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ೫೫೦೦ ಕೋಟಿ ಕೇಂದ್ರ ಅನುದಾನ ಕಡಿತಗೊಳಿಸಲಾಗಿದೆ ಎಂದು ಆರೋಪಿಸಿರುವ ಆವರು "ಇದರಿಂದ ಹಲವಾರು ಬಡ ಜನ ಪರ ಯೋಜನೆಗಳಾದ ನರೇಗಾ ಮತ್ತು ಮಧ್ಯಾಹ್ನದ ಬಿಸಿಯೂಟದ ಕಾರ್ಯಕ್ರಮಗಳಿಗೆ ತೊಂದರೆ ಆಗಿದೆ" ಎಂದಿದ್ದಾರೆ.

ಕೇಂದ್ರ ಅನುದಾನದ ಬಗ್ಗೆ ಮುಖ್ಯಮಂತ್ರಿ ಸದನವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ದೂರಿ ಈಶ್ವರಪ್ಪ ಮುಂದಾಳತ್ವದಲ್ಲಿ ಬಿಜೆಪಿ ಮುಖಂಡರು ಸಭಾತ್ಯಾಗ ಮಾಡಿದ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT